ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 12 ಅಕ್ಟೋಬರ್ 2019 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗದಲ್ಲಿ ಸಹೋದ್ಯೋಗಿಗಳ ಕಿರಿ ಕಿರಿಯಿಂದ ಮನಸ್ಸಿಗೆ ನೆಮ್ಮದಿಯಿಲ್ಲವಾದೀತು. ವ್ಯವಹಾರದಲ್ಲಿ ಮುನ್ನಡೆ ಗಳಿಸುವಿರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಖುಷಿ ನೀಡುವುದು.

ವೃಷಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಲು ಹೆಚ್ಚಿನ ಧನವ್ಯಯ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆ ಉಂಟಾಗಬಹುದು. ತಾಳ್ಮೆಯಿಂದಿರಿ.

ಕರ್ಕಟಕ: ಹೊಸ ಮಿತ್ರರ ಭೇಟಿಯಾಗುವಿರಿ. ಪ್ರೀತಿ ಪಾತ್ರರೊಂದಿಗೆ ಪ್ರವಾಸ, ಇಷ್ಟಭೋಜನ ಮಾಡುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಸಾಮಾಜಿಕವಾಗಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಗಳಿಸುವಿರಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಷ್ಟದ ಸಂದರ್ಭದಲ್ಲಿ ಮಿತ್ರರ ನೆರವು ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಿ.

 
ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗುವುದು. ದಾಯಾದಿಗಳೊಂದಿಗಿನ ಆಸ್ತಿ ವಿವಾದಗಳಿಗೆ ಅಂತ್ಯ ಸಿಗುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ತುಲಾ: ಹಿರಿಯರ ಮಾತಿಗೆ ಬೆಲೆಕೊಟ್ಟು ಮುನ್ನಡೆದರೆ ಇಂದು ಯಶಸ್ಸು ಗಳಿಸುವಿರಿ. ಪ್ರೀತಿ ಪಾತ್ರರಿಗಾಗಿ ಹೆಚ್ಚಿನ ಸಮಯ ಮೀಸಲಿಡಬೇಕಾಗುತ್ತದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತಿ ಯೋಗವಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವ್ಯಯ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆ, ಬಡ್ತಿ ಯೋಗವಿದೆ. ಸ್ವ ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗಿನ ಹಿನ್ನಡೆಯಾಗಬಹುದು. ತಾಳ್ಮೆಯಿಂದ ನಡೆದುಕೊಳ್ಳಿ.

ಧನು: ನಿಮ್ಮ ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವಾಗಬಹುದು. ಮಕ್ಕಳ ವಿಚಾರದಲ್ಲಿ ವಾಗ್ವಾದವಾಗಬಹುದು. ತಾಳ್ಮೆಯಿಂದಿರಿ. ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಸಾಧನೆಯಾಗುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮಕರ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳಲ್ಲಿ ಕೊಂಚ ಹಿನ್ನಡೆಯಾಗಬಹುದು. ನೂತನ ದಂಪತಿಗಳಿಗೆ ಸಂತಾನಫಲ ಸೂಚನೆ ಸಿಗಲಿದೆ. ವಿದ್ಯಾವಂತರಿಗೆ ಸೂಕ್ತ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ಕೃಷಿಕರಿಗೆ ಲಾಭವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಕುಂಭ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾದರೂ, ಉದರ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ಆರ್ಥಿಕವಾಗಿ ನಾನಾ ರೀತಿ ವೆಚ್ಚಗಳು ತಲೆದೋರಲಿವೆ. ಸಂಗಾತಿಯ ಮನದಾಸೆ ಪೂರೈಸುವಿರಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬಂದೀತು.

ಮೀನ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹಳೆಯ ಮಿತ್ರರೊಬ್ಬರ ಭೇಟಿ ಮನಸ್ಸಿಗೆ ಖುಷಿ ನೀಡುವುದು. ಕಳೆದುಹೋದ ವಸ್ತುಗಳು ಮರಳಿ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ವಾಹನ ಖರೀದಿಗೆ ಇದು ಸಕಾಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ