ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 13 ಅಕ್ಟೋಬರ್ 2019 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚಗಳಿರಲಿವೆ. ಗೃಹ ಸಂಬಂಧೀ ಕೆಲಸಗಳನ್ನು ಮಾಡಬೇಕಾಗುತ್ತದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರುವುದು. ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಭಿವೃದ್ಧಿ ಕಂಡುಬರುವುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.

ಮಿಥುನ: ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆಯಿಂದಿರುವುದು ಮುಖ್ಯ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಹೊಸ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಸ್ಥಾನ ಮಾನ ಹೆಚ್ಚುವುದು. ಸಾಹಿತ್ಯ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ನೂತನ ದಂಪತಿಗಳಿಗೆ ಮಧು ಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಇದುವರೆಗೆ ಇದ್ದ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ. ಹಂತ ಹಂತವಾಗಿ ಅಭಿವೃದ್ಧಿ ತೋರಿಬರುವುದು. ಕಿರು ಸಂಚಾರ ಮಾಡುವಿರಿ.

 
ಕನ್ಯಾ: ದಾಯಾದಿಗಳೊಂದಿಗೆ ಆಸ್ತಿ ವ್ಯವಹಾರದಲ್ಲಿ ವಾಗ್ವಾದಗಳಾಗದಂತೆ ಎಚ್ಚರವಹಿಸಿ. ಹಿರಿಯರ ಮಾತಿಗೆ ಬೆಲೆಕೊಡಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ದೇಹಾರೋಗ್ಯದ ಮೇಲೆ ನಿಗಾ ಇಡಿ.

ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಬಂಧುಗಳ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ವ್ಯಾಪಾರ, ವ್ಯವಹಾರದಲ್ಲಿ ಹಣಕಾಸಿನ ತೊಂದರೆಗಳು, ಅಡ್ಡಿ ಆತಂಕಗಳು ನಿವಾರಣೆಯಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗುವುದು. ಕೌಟುಂಬಿಕವಾಗಿ ಸಂತೋಷ, ನೆಮ್ಮದಿ ಅನುಭವಿಸುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಪುಣ್ಯ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಕುಂಭ: ಹಲವು ವಿಚಾರಗಳು ಮನಸ್ಸಲ್ಲಿ ಮೂಡಿ ಒಂದು ರೀತಿಯ ಋಣಾತ್ಮಕ ಭಾವನೆ ಮೂಡುವುದು. ಕೆಲಸದಲ್ಲಿ ಆಲಸ್ಯತನ ಕಂಡುಬರಬಹುದು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಬಹುದು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹೊಸ ಜಾಗಗಳಿಗೆ ಭೇಟಿ ನೀಡುವಿರಿ. ಸಾಧು ಸಂತರ ಭೇಟಿ ನೀಡುವ ಸಾಧ‍್ಯತೆಯಿದೆ. ಶೈಕ್ಷಕಣಿಕ ರಂಗದಲ್ಲಿರುವವರಿಗೆ ಮುನ್ನಡೆಯಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ