ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 22 ಅಕ್ಟೋಬರ್ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆತ್ಮಸ್ಥೈರ್ಯದಿಂದ ಮುನ್ನಡೆದರೆ ನಿಮ್ಮ ಕಾರ್ಯಸಾಧನೆಗೆ ಸುಸ್ರೂತ್ರವಾಗಿ ನಡೆಯಲಿದೆ. ನಿಮ್ಮ ಕುಟುಂಬ ಜೀವನ ಮತ್ತು ವೃತ್ತಿ ಜೀವನದ ನಡುವೆ ಹೊಂದಾಣಿಕೆ ಮಾಡಬೇಕಾದ ಅನಿವಾರ್ಯತೆ ಬರಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ.

ವೃಷಭ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಏಕಾಗ್ರತೆಗೆ ಭಂಗ ತರುವ ವಿಚಾರಗಳು ಎದುರಾಗಲಿವೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಮುನ್ನಡೆ ಅನುಭವಕ್ಕೆ ಬರುವುದು. ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಕರ್ಕಟಕ: ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಆಳಲು ಬಿಡಬೇಡಿ. ಇದರಿಂದ ಕೆಲಸದಲ್ಲಿ ನಿರುತ್ಸಾಹ ಕಾಡಬಹುದು. ದೈವಾನುಗ್ರಹದಿಂದ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಗಣ್ಯ ವ್ಯಕ್ತಿಗಳ ಭೇಟಿ ಮಾಡುವಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗಲಿದೆ.

ಸಿಂಹ: ದೃಢ ನಿರ್ಧಾರದಿಂದ ಮುನ್ನಡೆದರೆ ಅಂದುಕೊಂಡ ಕೆಲಸ ಸುಗಮವಾಗಿ ನೆರವೇರುವುದು. ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿಯಿರಲಿದೆ. ವೈಯಕ್ತಿಕ ಜೀವನದಲ್ಲಿ ಏರುಪೇರಾಗಬಹುದು. ತಾಳ್ಮೆಯಿಂದ ಮಾತನಾಡುವುದು ಮುಖ್ಯ.

 
ಕನ್ಯಾ: ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಿ. ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹೊಸ ಕೆಲಸಗಳಿಗೆ ಕೈ ಹಾಕುವಿರಿ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ತುಲಾ: ನಿರುದ್ಯೋಗಿಗಳು ಉದ್ಯೋಗಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಪಾಲಿಗೆ ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹಿರಿಯರ ತೀರ್ಥ ಯಾತ್ರೆಗೆ ತಯಾರಿ ನಡೆಸುವಿರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಎಚ್ಚರವಾಗಿರಿ.

ವೃಶ್ಚಿಕ: ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುವುದು. ಸಂಗಾತಿಯ ಪ್ರೀತಿ ಸಿಗಲಿದೆ. ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ.

ಧನು: ತೀರ್ಥಕ್ಷೇತ್ರಗಳ ಸಂದರ್ಶನ ನಡೆಸುವಿರಿ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮದ ಅಗತ್ಯವಿದೆ. ವಾಸ ಸ್ಥಳದ ಬದಲಾವಣೆಗೆ ಸಿದ್ಧತೆ ನಡೆಸುತ್ತೀರಿ. ಕಾರ್ಯಕ್ಷೇತ್ರದಲ್ಲಿ ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ.

ಮಕರ: ಅವಿವಾಹಿತರು ಯೋಗ್ಯ ಸಂಬಂಧ ಆರಿಸುವಾಗ ಎಚ್ಚರಿಕೆಯಿಂದಿರಿ. ಭವಿಷ್ಯ ರೂಪಿಸುವ ಬಗ್ಗೆ ಯೋಚನೆ ಮಾಡಬೇಕು. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆಯಿಂದಿರಿ.

ಕುಂಭ: ವಿವಿಧ ಮೂಲಗಳಿಂದ ಆದಾಯ ಬರುವ ನಿರೀಕ್ಷೆಯಿದೆ. ಆದರೆ ಆರ್ಥಿಕ ಯೋಜನೆಗಳ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆಯಿಡಿ. ನಿರುದ್ಯೋಗಿಗಳು ಉತ್ತಮ ಉದ್ಯೋಗ ಗಿಟ್ಟಿಸಲಿದ್ದಾರೆ. ಹೊಸ ಕೆಲಸಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ತಾಳ್ಮೆಯಿಂದಿರಿ.
ಮೀನ: ರಾಜಕೀಯ ವರ್ಗದವರಿಗೆ ಮುನ್ನಡೆಯ ಭಾಗ್ಯವಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಲಿದ್ದೀರಿ. ಪ್ರಯತ್ನದಿಂದ ಯಶಸ್ಸು ಸಾಧ‍್ಯ ಎಂಬುದನ್ನು ಮರೆಯಬೇಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ