ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 9 ಜನವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ, ವ್ಯವಹಾರದಲ್ಲಿ ಆದಾಯ ದ್ವಿಗುಣಗೊಳ್ಳಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಉದ್ಯೋಗದಲ್ಲಿ ಕಾರ್ಯದೊತ್ತಡ, ಕಿರಿ ಕಿರಿ ತಪ್ಪದು. ಸಾಂಸಾರಿಕವಾಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾಗಬಹುದು. ತಾಳ್ಮೆಯಿಂದಿರಿ.

ವೃಷಭ: ಅವಿವಾಹಿತರಿಗೆ ಶೀಘ‍್ರವೇ ಕಲ್ಯಾಣ ಭಾಗ್ಯವಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಂಗಾತಿಗೆ ಉಡುಗೊರೆ ನೀಡುವಿರಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗುವುದರಿಂದ ಗೃಹನಿರ್ಮಾಣ ಕಾರ್ಯಕ್ಕೆ ಕೈ ಹಾಕಿದ್ದರೆ ಅರ್ಧಕ್ಕೇ ನಿಲ್ಲುವುದು. ಹಿತಶತ್ರುಗಳಿಂದ ತೊಂದರೆ ಅನುಭವಿಸಬೇಕಾದೀತು. ವಿಘ್ನ ನಿವಾರಕನ ಪ್ರಾರ್ಥನೆ ಮಾಡಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ:  ವೃತ್ತಿರಂಗದಲ್ಲಿ ಮಾಡಿದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ. ದುಡುಕಿ ಮಾತನಾಡಿದರೆ ಕಾರ್ಯ ಹಾಳು ಎಂಬುದನ್ನು ಮರೆಯಬೇಡಿ. ಇಷ್ಟ ದೇವರ ಪ್ರಾರ್ಥನೆ ಮಾಡಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಾಣಬಹುದು. ಕಿರು ಸಂಚಾರ ಯೋಗವಿದೆ.

ಸಿಂಹ: ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಅಧಿಕಗೊಳ್ಳುವುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಆದರೆ ಆರ್ಥಿಕವಾಗಿ ದುರಾಸೆಯಾಗಬಹುದು. ಸಂಗಾತಿಯ ಸಲಹೆಗೆ ಕಿವಿಗೊಟ್ಟರೆ ಉತ್ತಮ. ವ್ಯವಹಾರದಲ್ಲಿ ಎಚ್ಚರ.

ಕನ್ಯಾ: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಮುನ್ನಡೆ ಕಂಡು ಸಂತಸವಾಗಲಿದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ. ಉದ್ಯೋಗ ರಂಗದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ಕಾರ್ಯನಿಮಿತ್ತ ಓಡಾಟ, ದೂರ ಸಂಚಾರಗಳಿಂದ ದೇಹಾರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಆದರೆ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಅಂದುಕೊಂಡ ಯೋಜನೆಗಳು ಕೈಗೂಡಲಿವೆ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಬಹುದು.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿ ಬರಲಿವೆ. ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಕೌಟುಂಬಿಕವಾಗಿ ದಾಯಾದಿಗಳಿಂದ ಕಿರಿ ಕಿರಿ ಎದುರಾಗಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ.

ಧನು: ನಿಮ್ಮ ಅತಿಯಾದ ಕಾಳಜಿಯೇ ಪ್ರೀತಿ ಪಾತ್ರರಿಗೆ ಉಸಿರುಗಟ್ಟಿಸಿದ ಅನುಭವವಾಗಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧೀ ಕಾರ್ಯದೊತ್ತಡ ಅಧಿಕವಾಗಲಿದೆ. ನಿಮ್ಮ ಪಾಲಿನ ಕರ್ತವ್ಯ ಮುಗಿಸಿದ ನೆಮ್ಮದಿ ಸಿಗಲಿದೆ.

ಮಕರ: ಆರ್ಥಿಕವಾಗಿ ಆದಾಯವಿದ್ದರೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ದೂರವಾದರೆ ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಅನಿರೀಕ್ಷಿತ ಯಾತ್ರೆಗೆ ಸಿದ್ಧರಾಗಬೇಕಾಗುತ್ತದೆ.

ಕುಂಭ: ಯೋಗ್ಯ ವಯಸ್ಕರಿಗೆ ಮದುವೆಯ ಚಿಂತೆ ಕಾಡಲಿದೆ. ಒಳ್ಳೆಯ ಸಂಬಂಧಗಳು ಬಂದರೂ ಸ್ವಲ್ಪದರಲ್ಲೇ ಕೈತಪ್ಪಿ ಹೋಗಲಿದೆ. ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ಮುಂಗೋಪಕ್ಕೆ ಕಡಿವಾಣ ಹಾಕಿದರೆ ಉತ್ತಮ.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ‍್ಯಾಸದಲ್ಲಿ ಒಂದು ರೀತಿಯ ಆಲಸ್ಯತನ ಕಂಡುಬರಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಗಮನಕ್ಕೆ ಬರಲಿದೆ. ಆರ್ಥಿಕವಾಗಿ ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ