ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 22 ಜನವರಿ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಲವು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಬಹುದು. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯ ಸಲಹೆಯನ್ನು ಪಾಲಿಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ಅವಸರವೇ ಅಪಘಾತಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ಮರೆಯದಿರಿ. ವೃತ್ತಿರಂಗದಲ್ಲಿ ಯೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಕಲಹಗಳಾದಂತೆ ಎಚ್ಚರವಹಿಸಿ. ಆರ್ಥಿಕ ಅಡಚಣೆಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು.

ಮಿಥುನ: ಸಾಂಸಾರಿಕವಾಗಿ ಹಿತಶತ್ರುಗಳಿಂದ ತೊಂದರೆ ಉಂಟಾದೀತು. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಲೆಕ್ಕವಿಟ್ಟುಕೊಂಡಿರಬೇಕು. ದೇವತಾ ಕಾರ್ಯನಿಮಿತ್ತ ಧನವ್ಯಯವಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿ, ಪ್ರೀತಿ ಪಾತ್ರರ ಅನುಪಸ್ಥಿತಿ ಮನಸ್ಸಿಗೆ ಬೇಸರವುಂಟುಮಾಡಬಹುದು. ವೃತ್ತಿರಂಗದಲ್ಲಿ ನಿಮ್ಮ ಪ್ರತಿಭೆ, ಪರಿಶ್ರಮಕ್ಕೆ ಬೆಲೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಸಿಂಹ: ಹಂತ ಹಂತವಾಗಿ ನೀವು ಅಂದುಕೊಂಡ ಅಭಿವೃದ್ಧಿ ಯೋಜನೆಗಳು ಕೈಗೂಡಲಿವೆ. ಅನಗತ್ಯ ವಿಚಾರಗಳಿಗೆ ಚಿಂತೆ ಬೇಡ. ದೂರ ಪ್ರಯಾಣದಲ್ಲಿ ಎಚ್ಚರವಾಗಿರಿ. ವಾಹನ ಖರೀದಿ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶ್ನೆಗಳಿಂದ ಬೇಸತ್ತುಹೋಗುವಿರಿ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರವಹಿಸಿ. ಮಕ್ಕಳಿಂದ ಸಂತಸ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಸಮಸ್ಯೆಗಳು ಬರಬಹುದು. ಎಚ್ಚರವಾಗಿರಿ.

ತುಲಾ: ಕಾರ್ಯಕ್ಷೇತ್ರದಲ್ಲಿ ತುರ್ತು ಸನ್ನಿವೇಶಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಪಡೆಯುತ್ತೀರಿ. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯವಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರ ಸಂದರ್ಶನ ಯೋಗವಿದೆ.

ವೃಶ್ಚಿಕ: ಧಾರ್ಮಿಕವಾಗಿ ಭಕ್ತಿ, ಭಾವ ಹೆಚ್ಚುವುದು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಧನು: ಮನದಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಯತ್ನಿಸುತ್ತಿದ್ದವರಿಗೆ ಯಶಸ್ಸು ಸಿಗಲಿದೆ. ಆದರೆ ಹಣಕಾಸಿನ ವಿಚಾರದಲ್ಲಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ.

ಮಕರ: ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ಕರೆ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರುವುದು. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವೃತ್ತಿರಂಗದಲ್ಲಿ ನೀವು ಅಂದುಕೊಂಡಂತೆಯೇ ಬೆಳವಣಿಗೆ ನಡೆಯಲಿದ್ದು, ಸಮಾಧಾನಕರ ದಿನವಾಗಿರಲಿದೆ. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ಪ್ರಯತ್ನಬಲವಿದ್ದರೆ ಕಾರ್ಯಸಾಧನೆಗೆ ತೊಂದರೆಯಾಗದು. ಪತ್ನಿಯ ಸಹಕಾರ ಸಿಗಲಿದೆ.

ಮೀನ: ಪ್ರತಿಷ್ಠಿತರ ಸಹಕಾರದಿಂದ ನೀವು ಅಂದುಕೊಂಡ ಕೆಲಸಗಳನ್ನು ಸುಲಭವಾಗಿ ನೆರವೇರಿಸುವಿರಿ. ಪಾಲು ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರ. ಸಾಧು ಸಂತರ ಭೇಟಿ ಮನಸ್ಸಿಗೆ ನೆಮ್ಮದಿ ಕೊಡುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ