ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 29 ಫೆಬ್ರವರಿ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬರಬೇಕಿದ್ದ ಬಾಕಿ ಹಣ ಪಾವತಿಯಾಗುವುದರಿಂದ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ವೃತ್ತಿರಂಗದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗಲಿದೆ. ಬಂಧು ವರ್ಗದವರಿಂದ ಚಾಡಿ ಮಾತುಗಳನ್ನು ಕೇಳಬೇಕಾದೀತು. ವಾದ ವಿವಾದಗಳಿಂದ ಮನಸ್ಸಿಗೆ ಕಿರಿ ಕಿರಿಯಾಗಲಿದೆ. ವಿದ್ಯಾರ್ಥಿಗಳಿಗೆ ಪ್ರವಾಸ ಮಾಡುವ ಯೋಗವಿದೆ. ಮಾನಸಿಕವಾಗಿ ಕ್ಲೇಶಗಳು ಹುಟ್ಟಿಕೊಳ‍್ಳಲಿದೆ.

ಮಿಥುನ: ಸಾಹಿತ್ಯ, ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಸಾಕಷ್ಟು ಆದಾಯ ಇರುವುದರಿಂದ ಹಣಕಾಸಿಗೆ ತೊಂದರೆಯಾಗದು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲು ತೊಂದರೆಯಾಗಬಹುದು. ಸಾಂಸಾರಿಕವಾಗಿ ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ನವವಿವಾಹಿತರು ಸಂತಸದ ಕ್ಷಣ ಕಳೆಯಿರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗಲಿದೆ. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಬೇಡಿ. ಸಂಗಾತಿಯ ಹಿತ ಮಾತುಗಳು ಮನಸ್ಸಿಗೆ ನೆಮ್ಮದಿ ಕೊಡಲಿದೆ. ಕುಲದೇವರ ಪ್ರಾರ್ಥನೆ ಮಾಡುವುದರಿಂದ ಶುಭವಾಗುವುದು.

ಕನ್ಯಾ: ಮನೆಗೆ ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಮನಸ್ಸಿಗೆ ಸಂತಸವಾಗಲಿದೆ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಆರೋಗ್ಯದಲ್ಲಿ ಶೀತ ಸಂಬಂಧೀ ಸಮಸ್ಯೆ ಕಂಡುಬರಬಹುದು. ಅಂದುಕೊಂಡ ಕೆಲಸಗಳಿಗೆ ವಿಘ‍್ನ ಎದುರಾಗಬಹುದು.

ತುಲಾ: ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದಾರೆ. ಕೆಳ ಹಂತದ ನೌಕರರಿಗೆ ವರ್ಗಾವಣೆಯ ಸಾಧ್ಯತೆಯಿದೆ. ಸಂತಾನಾಪೇಕ್ಷಿತ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ದೇವರ ‍ಪ್ರಾರ್ಥನೆ ಮಾಡಿ.

ವೃಶ್ಚಿಕ: ಆರ್ಥಿಕವಾಗಿ ಸಾಕಷ್ಟು ಧನಾದಾಯ ಬರುವುದರಿಂದ ಅಂದುಕೊಂಡು ಕೆಲಸಗಳನ್ನು ನಿರ್ವಿಘ್ನವಾಗಿ ನೆರವೇರಿಸುವಿರಿ. ಸಾಲಗಾರರ ಕಾಟ ತಪ್ಪಲಿದೆ. ರಾಜಕೀಯ ವರ್ಗದವರಿಗೆ ಸ್ಥಾನ ಉಳಿಸಿಕೊಳ್ಳಲು ಹೋರಾಡಬೇಕಾಗುತ್ತದೆ. ಹಿರಿಯರ ಸಲಹೆಗೆ ಕಿವಿಗೊಡಿ.

ಧನು: ಶನಿಯ ಪ್ರತಿಕೂಲ ಪರಿಣಾಮದಿಂದ ಕೂಡಿಟ್ಟದ ಹಣ ನೀರಿನಂತೆ ಖರ್ಚಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನವೇ ಶತ್ರುವಾಗಲಿದೆ. ವ್ಯವಹಾರದಲ್ಲಿ ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸವಿರಲಿದೆ.

ಮಕರ: ವಿವಾಹಿತರಿಗೆ ಮನಸ್ಸಿಗೆ ಖುಷಿಕೊಡುವ ಸುದ್ದಿ ಸಿಗಲಿದೆ. ನಿಮ್ಮ ದುಡುಕು ಮಾತಿನಿಂದ ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗಬಹುದು. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಮನೆ, ಭೂ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಧನಾದಾಯ ಉತ್ತಮವಾಗಿರಲಿದೆ. ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಪ್ರೇಮಿಗಳ ಪಾಲಿಗೆ ಶುಭ ದಿನವಾಗಿರಲಿದೆ.

ಮೀನ: ಹೊಸ ನೆಂಟಸ್ತಿಕೆಗಳು ಕೂಡಿಬರಲಿದೆ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆಯಿಂದಿರುವುದು ಅಗತ್ಯ. ನೀರಿಗಾಗಿ ನೆರೆಹೊರೆಯವರೊಂದಿಗೆ ಮನಸ್ತಾಪವಾದೀತು. ಹೊಸ ವೃತ್ತಿಗೆ ಚಾಲನೆ ನೀಡಲು ಇದು ಸಕಾಲ. ಕಿರು ಸಂಚಾರ ಯೋಗವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ