ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 6 ಮಾರ್ಚ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹಿಣಿಯರಿಗೆ ಇಷ್ಟಾರ್ಥ ಸಿದ್ಧಿಯಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳಿಬರಲಿದೆ. ಸಂಗಾತಿಯ ಮಾತುಗಳು ಮನಸ್ಸಿಗೆ ಕಿರಿ ಕಿರಿ ಎನಿಸಬಹುದು. ತಾಳ್ಮೆಯಿಂದ ನಿಭಾಯಿಸಿ. ಉದ್ಯೋಗ ರಂಗದಲ್ಲಿ ಬಯಸಿದ ಸ್ಥಾನ ಪಡೆಯಲು ಪರಿಶ್ರಮಪಡಬೇಕಾದೀತು.

ವೃಷಭ: ಆರ್ಥಿಕವಾಗಿ ಲೆಕ್ಕಾಚಾರವಿಟ್ಟುಕೊಳ್ಳದೇ ಇದ್ದರೆ ತೊಂದರೆಯಾದೀತು. ಸರಕಾರಿ ಅಧಿಕಾರಿಗಳಿಗೆ ಹಿನ್ನಡೆಯಾದೀತು. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವೃತ್ತಿರಂಗದಲ್ಲಿ ಆದಾಯ ಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ಗೃಹ ಸಂಬಂಧೀ ಸಮಸ್ಯೆಗಳು ಮಾನಸಿಕವಾಗಿ ಹಿಂಸೆ ನೀಡಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು.

ಸಿಂಹ: ಮನೆಗೆ ಅನಪೇಕ್ಷಿತ ಅತಿಥಿಗಳ ಆಗಮನವಾಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ಎಚ್ಚರಿಕೆಯಿಂದಿರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಹಳೆಯ ಮಿತ್ರನ ಭೇಟಿಯಾಗುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕನ್ಯಾ: ಅನವಶ್ಯಕವಾಗಿ ಇಲ್ಲದ ತೊಂದರೆಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಪ್ರೀತಿ ಪಾತ್ರರೊಂದಿಗೆ ಮಾತನಾಡುವಾಗ ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಮನೆ ಬದಲಾವಣೆ ಮಾಡಲಿದ್ದೀರಿ.

ತುಲಾ: ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಾಯ ಸಿಗಲಿದೆ. ಸಾಂಸಾರಿಕವಾಗಿ ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೂರ ಸಂಚಾರ ರದ್ದಾಗಲಿದೆ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ವಿನಾಕಾರಣ ಮೂಗುತೂರಿಸುವವರು ಇದ್ದೇ ಇರುತ್ತಾರೆ. ಸಂಯಮದಿಂದ ನಿಭಾಯಿಸಬೇಕು. ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಹೊಸ ಯೋಜನೆಗಳನ್ನು ಆರಂಭಿಸಲಿದ್ದೀರಿ.

ಧನು: ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದಾಂಪತ್ಯದಲ್ಲಿ ಅನ್ಯೋನ್ಯತೆ ಕಂಡುಬರುವುದು. ಇಷ್ಟ ಭೋಜನದ ಯೋಗವಿದೆ.

ಮಕರ: ನಿರೀಕ್ಷಿತ ಕಾರ್ಯಸಾಧನೆಯಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ. ನಿಮ್ಮ ನಿರ್ಧಾರಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಇದುವರೆಗೆ ನೀವು ಅಸಾಧ್ಯವೆಂದು ಕೂತಿದ್ದ ಕೆಲಸಗಳು ಇಂದು ಮಿತ್ರರ ಸಹಾಯದಿಂದ ಸುಗಮವಾಗಿ ನೆರವೇರುವುದು. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಮಕ್ಕಳಿಂದ ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಬಹುದು. ಆರ್ಥಿಕವಾಗಿ ಸುಧಾರಣೆಗೆ ಅವಕಾಶಗಳಿರಲಿವೆ. ಸಾಂಸಾರಿಕ ಸುಖಕ್ಕೆ ಕೊರತೆಯಿರದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ