ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 22 ಜೂನ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕ ವಿಚಾರದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಾಗಲಿವೆ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪಗಳಿಗೆ ಪಶ್ಚಾತ್ತಾಪ ಪಡುವಂತಾದೀತು. ಮಕ್ಕಳ ವಿಚಾರದಲ್ಲಿ ಸಂತಸ ಕೇಳಿಬರಲಿದೆ. ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಷಭ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿನಾಕಾರಣ ವಿವಾದ ಮೈಮೇಲೆಳೆದುಕೊಳ್ಳುವಿರಿ. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.

ಮಿಥುನ: ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಮುಂದಿನ ಹೆಜ್ಜೆಯಿಡಬೇಕಾಗುತ್ತದೆ. ಹಿತಶತ್ರುಗಳ ವಂಚನೆ ಬಯಲಿಗೆ ಬರಲಿದೆ. ಸಾಮಾಜಿಕ ರಂಗದಲ್ಲಿ ಉತ್ತಮ ಸ್ಥಾನ ಮಾನ ಲಭ್ಯವಾಗಲಿದೆ.

ಕರ್ಕಟಕ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ದೇಹಾರೋಗ್ಯದಲ್ಲಿ ಕೊಂಚ ಮಟ್ಟಿನ ಸುಧಾರಣೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.

ಸಿಂಹ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕಾರ್ಯ ಸಾಧನೆ ಮಾಡಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ. ಅವಿವಾಹಿತರು ಶೀಘ್ರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.  

ಕನ್ಯಾ: ಆರ್ಥಿಕವಾಗಿ ಋಣಬಾಧೆ ಕಾಡಲಿದೆ. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಧರ್ಮಸತ್ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ನಿಭಾಯಿಸಲು ಕುಟುಂಬದವರ ಸಹಕಾರ ಪಡೆಯುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ಪ್ರೇಮ ಪ್ರಕರಣಗಳಲ್ಲಿ ಜಯ ಸಿಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿಂದ ನಡೆದುಕೊಂಡರೆ ಸುಖ ಪ್ರಾಪ್ತಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಅನಗತ್ಯವಾಗಿ ಮಕ್ಕಳ ವಿಚಾರದಲ್ಲಿ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ನಿಮ್ಮ ಕೆಲವೊಂದು ಮಾತುಗಳು ಕಲಹಕ್ಕೆ ಕಾರಣವಾದೀತು. ಸಂಯಮ, ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳು ಏಕಾಗ್ರತೆಗಾಗಿ ದೇವರ ಪ್ರಾರ್ಥನೆ ಮಾಡುವುದು ಉತ್ತಮ. ಉದ್ಯೋಗದಲ್ಲಿ ಅಭಿವೃದ್ಧಿಯಿರಲಿದೆ.

ಮಕರ: ಯಾವುದೇ ಕೆಲಸ ಕಾರ್ಯಗಳು ನಿರೀಕ್ಷಿಸಿದ ರೀತಿಯಲ್ಲಿ ಫಲ ಕೊಡದೇ ಇದ್ದಾಗ ಮನಸ್ಸಿಗೆ ಬೇಸರವಾಗಬಹುದು. ಸತತ ಪ್ರಯತ್ನದಿಂದ ಫಲ ಸಾಧ‍್ಯ. ಯಾರೋ ಮಾಡಿದ ತಪ್ಪಿಗೆ ನೀವು ಬೆಲೆ ತೆರಬೇಕಾಗುತ್ತದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕುಂಭ: ಸರಕಾರಿ ಕೆಲಸಗಳು ವಿಳಂಬ ಗತಿಯಲ್ಲಿ ಸಾಗಲಿವೆ. ಅನಗತ್ಯ ಪ್ರಯಾಣದಿಂದ ದುಂದು ವೆಚ್ಚವಾಗಲಿದೆ. ಆರ್ಥಿಕ ಪರಿಸ್ಥಿತಿ ಬಗ್ಗೆ ಗಮನವಿರಲಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಮೀನ: ಹಿರಿಯರಿಂದ ಬಂದ ಉಡುಗೊರೆಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾಗಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಚಾಲನೆ ನೀಡಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ