ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 19 ಆಗಸ್ಟ್ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನ್ಯಾಯಾಲಯದ ಕಲಾಪಗಳಲ್ಲಿ ನಿಮಗೆ ಜಯ ಸಿಗಲಿದೆ. ವ್ಯಾಪಾರದಲ್ಲಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಚಿನ್ನಾಭರಣ ಖರೀದಿಗೆ ಸದ್ಯದಲ್ಲೇ ಯೋಗಿ ಕೂಡಿಬರಲಿದೆ. ನಿಮ್ಮ ಹಳೆಯ ಮಿತ್ರರನ್ನು ಭೇಟಿಯಾಗುವ ಸದವಾಕಾಶ ಸಿಗಲಿದೆ.

ವೃಷಭ: ವೃತ್ತಿ ರಂಗದಲ್ಲಿ ನಿಮ್ಮ ದುಡುಕು ಬುದ್ಧಿಯಿಂದ ಉತ್ತಮ ಅವಕಾಶ ಕಳೆದುಕೊಳ್ಳುವ ದುಸ್ಥಿತಿ ಎದುರಾಗಲಿದೆ. ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಮಿಥುನ: ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಕೋರ್ಟು ಕಚೇರಿ ಕಲಾಪಗಳಲ್ಲಿ ಜಯ ಸಿಗಲಿದೆ.

ಕರ್ಕಟಕ: ಅನಗತ್ಯ ವಿಚಾರಗಳನ್ನು ಅತಿಯಾಗಿ ಮನಸ್ಸಿಗೆ ಹಚ್ಚಿಕೊಂಡು ಕೊರಗುವುದನ್ನು ಬಿಡಿ. ಕಾರ್ಮಿಕ ವರ್ಗದವರಿಗೆ ಆದಾಯದ ಕೊರತೆ ಉಂಟಾಗಲಿದೆ. ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಿರಿಯರಿಗೆ ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಶೈಕ್ಷಣಿಕ ರಂಗದಲ್ಲಿರುವವರಿಗೆ ಹೊಸ ಅವಕಾಶಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಕನ್ಯಾ: ವೃತ್ತಿರಂಗದ ಕಾರ್ಯನಿಮಿತ್ತ ಪರ ಊರಿಗೆ ಪ್ರಯಾಣಿಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ. ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬದ ಸದಸ್ಯರಲ್ಲಿ ಅಸಮಾಧಾನ ಉಂಟುಮಾಡಬಹುದು. ತಾಳ್ಮೆ, ಸಂಯಮವಿರಲಿ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿದೆ. ಬಂಧು ವರ್ಗದವರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಧಾರ್ಮಿಕ ಕಾರ್ಯಗಳಿಗೆ ಪತ್ನಿಯ ಸಹಯೋಗ ಸಿಗಲಿದೆ. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಶ್ಚಿಕ: ಕಲಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಸಾಮಾಜಿಕವಾಗಿ ಕೀರ್ತಿ, ಯಶಸ್ಸು ಸಂಪಾದಿಸಲಿದ್ದೀರಿ. ಎಚ್ಚರಿಕೆಯ ಹೆಜ್ಜೆಯಿಟ್ಟಲ್ಲಿ ತಾಂತ್ರಿಕ ವರ್ಗದ ಕೆಲದಲ್ಲಿರುವವರಿಗೆ ಮುನ್ನಡೆ ಲಭ್ಯವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಲಭ್ಯವಾಗಲಿದೆ. ಸರಿಯಾಗಿ ಬಳಸಿಕೊಳ್ಳಬೇಕು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕ್ರಯ-ವಿಕ್ರಯ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಕೃಷಿಕರಿಗೆ ವ್ಯವಹಾರದಲ್ಲಿ ವಿಘ್ನ ಕಂಡುಬಂದೀತು. ಅಂದುಕೊಂಡ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗದೇ ಇದ್ದಾಗ ನಿರಾಸೆಯಾಗಬಹುದು. ತಾಳ್ಮೆಯಿರಲಿ. ಮನೆಗೆ ಬೇಕಾದ ನೂತನ ವಸ್ತು ಖರೀದಿ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಅಥವಾ ವರ್ಗಾವಣೆ ಸಾಧ್ಯತೆಯಿದೆ. ಯಾವುದೇ ಪರಿಸ್ಥಿತಿ ಎದುರಿಸಲೂ ಸಿದ್ಧರಾಗಬೇಕು. ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಕೈ ಹಾಕಲು ಇದು ಸಕಾಲ. ಪೋಷಕರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಮೀನ: ಎಷ್ಟೋ ದಿನದಿಂದ ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಜಠರ ಸಂಬಂಧೀ ಆರೋಗ್ಯ ಸಮಸ್ಯೆ ತಪ್ಪದು. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಿ ಚಿಂತೆಯಾದೀತು.  ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಬಳಸಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ