ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 20 ಆಗಸ್ಟ್ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಅಸಹಾಕರ ಅಸಮಾಧಾನವುಂಟು ಮಾಡಲಿದೆ. ಬಾಕಿ ಹಣ ವಸೂಲಾತಿ ಚಿಂತೆ ಕಾಡುವುದು. ವೃತ್ತಿರಂಗದಲ್ಲಿ ಹೊಸ ಬಗೆಯ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ವೃಷಭ: ಮನಸ್ಸಿಗೆ ಅನಿಸಿದ್ದನ್ನು ಮಾಡುತ್ತಾ ಹೋಗುವುದರಿಂದ ಕುಟುಂಬ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗುವುದು.

ಮಿಥುನ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬರಲಿದೆ. ನೀವು ಅಂದುಕೊಂಡಂತೇ ಕೆಲಸಗಳು ನಡೆಯದೇ ಹತಾಶೆಯಾಗಬಹುದು. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡುವ ಪರಿಸ್ಥಿತಿ ಬರಲಿದೆ. ದಿನದಂತ್ಯಕ್ಕೆ ಎಚ್ಚರಿಕೆ ಅಗತ್ಯ.

ಕರ್ಕಟಕ: ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಸಿಗಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನನ್ನು ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಕೆಲಸ ಕಾರ್ಯಗಳು ನೀವು ಅಂದುಕೊಂಡ ರೀತಿಯಲ್ಲೇ ಸಾಗಲಿವೆ. ವೈವಾಹಿಕ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ.

ಸಿಂಹ: ಶ್ರೀದೇವತಾ ಅನುಗ್ರಹದಿಂದ ಅಂದುಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ದಾಯಾದಿಗಳೊಂದಿಗಿನ ಭಿನ್ನಾಭಿಪ್ರಾಯಗಳು ನಿವಾರಣೆಯಾಗಲಿವೆ.

ಕನ್ಯಾ: ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ಇರಲಿ. ಆಗಾಗ ಬಂಧು ಮಿತ್ರರ ಚಾಡಿ ಮಾತುಗಳಿಂದ ಮನಸ್ಸಿಗೆ ನೆರವಾಗಬಹುದು. ಮಾಡುವ ಕೆಲಸದಲ್ಲಿ ಹೆಚ್ಚಿನ ಏಕಾಗ್ರತೆ ಬೇಕಾಗುತ್ತದೆ. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಸದವಕಾಶಗಳು ಸಿಗಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಗೃಹ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಸಾಂಸಾರಿಕವಾಗಿ ಮನದೆನ್ನೆಯ ಮನಸ್ಸಿಗೆ ಸಂತೋಷ ಕೊಡಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಧನು: ವೃತ್ತಿರಂಗದಲ್ಲಿ ಉತ್ತಮ ಸ್ನೇಹಸಂಗದಿಂದ ನೀವು ಅಂದುಕೊಂಡಿದ್ದನ್ನು ಸಾಧಿಸಬಹುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಮಕರ: ಆಗಾಗ ಆರೋಗ್ಯದಲ್ಲಿ ಏರುಪೇರಾಗುವುದರಿಂದ ಆತಂಕವಾದೀತು. ಪತಿ-ಪತ್ನಿಯರಲ್ಲಿ ಹೊಂದಾಣಿಕೆ ಅಗತ್ಯ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಸ್ವಕ್ಷೇತ್ರದಲ್ಲಿ ಸಾಧನೆ ಮಾಡಲು ಆಸಕ್ತಿ ಮೂಡಲಿದೆ. ಹಿರಿಯರ ಬಗ್ಗೆ ಕಾಳಜಿವಹಿಸಿ.

ಕುಂಭ: ಆರ್ಥಿಕವಾಗಿ ನಾನಾ ಖರ್ಚು ವೆಚ್ಚಗಳು ಕಂಡುಬಂದರೂ ಸಕಾಲಕ್ಕೆ ಆದಾಯ ಬರುವುದರಿಂದ ಸಮಸ್ಯೆಯಾಗದು. ಹಿತ ಶತ್ರುಗಳ ಕಾಟದಿಂದ ಮನಸ್ಸಿಗೆ ಕಿರಿ ಕಿರಿಯಾಗಬಹುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಎಷ್ಟೋ ದಿನಗಳ ಬಳಿಕ ಇಷ್ಟ ಮಿತ್ರರ ಭೇಟಿಯಾಗುವ ಯೋಗವಿದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳು ಕಂಡುಬಂದೀತು. ಹೆಣ್ಣು ಮಕ್ಕಳಿಂದ ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ