ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 26 ನವೆಂಬರ್ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಉದಾಸೀನ ಪ್ರವೃತ್ತಿ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ಖಾಸಗಿ ದಬುಕಿನಲ್ಲಿ ಮೂಗು ತೂರಿಸುವವರನ್ನು ನಿರ್ಲ್ಷ್ಯಕ್ಷಿಸುವುದೇ ಉತ್ತಮ. ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದಾರೆ. ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಶುಭ ಮಂಗಲ ಕಾರ್ಯಕ್ಕಾಗಿ ಓಡಾಟ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನ ಗಳಿಕೆಗೆ ಉತ್ತಮ ದಾರಿ ತೋರಿಬರಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಕಿರು ಓಡಾಟ ನಡೆಸುವಿರಿ.

ಕರ್ಕಟಕ: ಆತ್ಮವಿಶ್ವಾಸದ ಕೊರತೆಯಿಂದ ಹೊಸ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಲಾಭಕರ ದಿನಗಳು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕೌಟುಂಬಿಕವಾಗಿ ನಿಮಗೆ ಅನುಕೂಲಕರವಲ್ಲದ ಪರಿಸ್ಥಿತಿಯಿರಲಿದ್ದು, ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರದಿಂದ ದೇಹಾಯಾಸವಾದೀತು. ಹಿರಿಯರಿಗೆ ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ನೆಮ್ಮದಿ ಸಿಗಲಿದೆ.

ಕನ್ಯಾ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಅನಗತ್ಯ ಚಿಂತೆ ಬೇಡ.

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಮನಸ್ಸಿಗೆ ಬೇಸರವಾದೀತು. ಪೋಷಕರ ಮನಸ್ಸಿಗೆ ನೋವುಂಟುಮಾಡಬೇಡಿ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಂಗಾತಿಯು ನಿಮ್ಮ ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕೊಂಚ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧೀ ಕೆಲಸಗಳಿಗೆ ಅಡಚಣೆಗಳು ತೋರಿಬಂದೀತು. ನಿಧಾನವಾಗಿ ಯೋಚಿಸಿ ಹೆಜ್ಜೆಯಿಡಿ.

ಧನು: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಂಗಾತಿಯ ಮನಸ್ಸೂ ಹಾಳುಮಾಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಮುಖ್ಯ. ಮಾತಿನ ಮೇಲೆ ಕೊಂಚ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆವಹಿಸಿ.

ಮಕರ: ಕಾರ್ಯರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಮನೋಭಾವನೆಗಳನ್ನು ಹತೋಟಿಯಲ್ಲಿಡುವುದು ಮುಖ್ಯ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಕೌಟುಂಬಿಕವಾಗಿ ಸುಖ ಶಾಂತಿಗೆ ಕೊರತೆಯಿರದು. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮೀನ: ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಖುಷಿ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ