ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 10 ಡಿಸೆಂಬರ್ 2020 (09:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಯಾವುದೇ ಅಡ್ಡಿ ಆತಂಕವಾಗದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಸರಿಯಾದ ಲೆಕ್ಕಾಚಾರವಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ ಸಿಗಲಿದೆ.

ವೃಷಭ: ಹಿರಿಯರಿಗೆ ತಮ್ಮ ಕೆಲಸಗಳಿಗೆ ಇತರರ ಮೇಲೆ ಅವಲಂಬಿಸುವುದು ಅಸಹನೀಯವಾಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಐಡಿಯಾಗಳು ಸಿಗಲಿವೆ.

ಮಿಥುನ: ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳಿಂದ ವಂಚನೆಯಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೆಲಸದಲ್ಲಿ ಯಶಸ್ಸು ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ಕ್ರಿಯಾತ್ಮಕವಾಗಿ ಯೋಚನೆ ಮಾಡುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿಂದೆ ಹೂಡಿದ್ದ ಬಂಡವಾಳಕ್ಕೆ ಇಂದು ತಕ್ಕ ಬೆಲೆ ಸಿಗಲಿದೆ. ಇಷ್ಟಮಿತ್ರರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.

ಕನ್ಯಾ: ಸಂಗಾತಿಯಿಂದ ಶುಭ ನುಡಿ ಕೇಳಿಬರಲಿದೆ. ಸಾಂಸಾರಿಕವಾಗಿ ಸಂತೋಷದ ದಿನಗಳಿವು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಅಧಿಕಾರಿಗಳಿಗೆ ಕೆಲಸದೊತ್ತಡವಿರಲಿದೆ. ಹಾಗಿದ್ದರೂ ಮುನ್ನಡೆಗೆ ಅಡ್ಡಿಯಿರದು.

ತುಲಾ: ಮನಸ್ಸು ಬಯಸಿದ್ದನ್ನು ಪಡೆಯಲು ಕಷ್ಟಪಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಹಣಕಾಸಿನ ಮುಗ್ಗಟ್ಟು ಸರಿದೂಗಿಸಲು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಕುಲದೇವರಪ್ರಾರ್ಥನೆ ಮಾಡಿ.

ವೃಶ್ಚಿಕ: ನೂತನ ದಂಪತಿಗಳಿಗೆ ಸಂತೋಷಕರ ದಿನವಾಗಲಿದೆ. ಹೊಸ ಸ್ಥಳಗಳಿಗೆ ಭೇಟಿ ಕೊಡಲಿದ್ದೀರಿ. ಹೊಸ ಸಂಬಂಧಗಳು ಬೆಳೆಯಲಿವೆ. ಕಾರ್ಯರಂಗದಲ್ಲಿ ನಿಮ್ಮ ಮುನ್ನಡೆಗೆ ಅಡೆತಡೆಗಳು ಬಂದೀತು. ನಿಭಾಯಿಸಿಕೊಂಡು ಹೋಗಬೇಕಿದೆ.

ಧನು: ಅನಗತ್ಯ ವಿಚಾರಗಳ ಬಗ್ಗೆ ನೀವು ತಲೆಕಡಿಸಿಕೊಂಡು ಸಂಗಾತಿಯ ನೆಮ್ಮದಿಯನ್ನೂ ಹಾಳು ಮಾಡಬೇಡಿ. ನಿಮ್ಮ ಅತಿಯಾದ ಮಾತಿಗೆ ಕಡಿವಾಣ ಹಾಕಿದರೆ ಉತ್ತಮ. ಬಂಧುಮಿತ್ರರ ಭೇಟಿಯಾಗುವ ಸಾಧ‍್ಯತೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಸಂತಾನರಹಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ಕುಂಭ: ಬೇರೆಯವರ ಕಷ್ಟಕ್ಕೆ ನೆರವಾಗುವ ನಿಮ್ಮ ಗುಣ ಮುಂದೆ ನಿಮ್ಮ ಕೈ ಹಿಡಿಯಲಿದೆ. ಹೊಸ ಯೋಜನೆಗಳ ಕುರಿತು ಹೆಜ್ಜೆ ಹಾಕುವಾಗ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಅನಿವಾರ್ಯವಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ದಾಯಾದಿಗಳ ನಡುವೆ ಕಲಹ ಮನಸ್ಸಿಗೆ ಕಿರಿ ಕಿರಿ ಉಂಟುಮಾಡಲಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ದೂರ ಪ್ರಯಾಣ ಮಾಡಬೇಕಾಗಿ ಬರಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ತಾಳ್ಮೆ, ಸಂಯಮವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ