ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 8 ಜನವರಿ 2021 (09:28 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಪ್ರೀತಿ ಪಾತ್ರರ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚಲಿದೆ. ತಾಳ್ಮೆ, ಸಂಯಮ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಮಾಜಕ್ಕೆ ಒಳಿತಾಗುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಸ್ಥಾನ ಮಾನ ವೃದ್ಧಿಯಾಗುವುದು. ವಿದ್ಯಾರ್ಥಿಗಳ ಸಾಧನೆ ಪೋಷಕರ  ಸಂತಸಕ್ಕೆ ಕಾರಣವಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಲಾಭದಾಯಕ ದಿನ.

ಮಿಥುನ: ನೂತನ ದಂಪತಿಗಳಿಗೆ ಶೀಘ‍್ರದಲ್ಲೇ ಸಂತಾನ ಫಲ ಸೂಚನೆ ಸಿಗಲಿದೆ. ದೇವತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ಯೋಜನೆಗೆ ಸಿದ್ಧತೆ ಮಾಡಲಿದ್ದೀರಿ. ಖರ್ಚು ವೆಚ್ಚ ಮಿತಿಯಲ್ಲಿರಲಿ.

ಕರ್ಕಟಕ: ಕಷ್ಟಪಟ್ಟು ಕೆಲಸ ಮಾಡಿದರೆ ಅದಕ್ಕೆ ತಕ್ಕ ಫಲ ಸಿಗುವುದು. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಹೊಸ ಕಟ್ಟಡ ನಿರ್ಮಾಣಾದಿ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗಲಿದೆ. ಧನಗಳಿಕೆಗೆ ನಾನಾ ರೀತಿಯ ಮಾರ್ಗ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ದಾರಿಗಳು ಸಿಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಕಲಿಕೆಯ ಮಾರ್ಗದಲ್ಲಿ ನಾನಾ ರೀತಿಯ ವಿಘ‍್ನಗಳು ತೋರಿಬಂದೀತು. ಆದರೆ ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಸಿಗುವುದು. ಸಂಗಾತಿಯು ನಿಮ್ಮ ಭಾವನೆಗಳಿಗೆ ಸ್ಪಂದಿಸಲಿದ್ದೀರಿ. ಹೊಸ ಮಿತ್ರರ ಸಂಪಾದಿಸಲಿದ್ದೀರಿ.

ತುಲಾ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಬಂಧು ಮಿತ್ರರ ಆಗಮನ ಮನಸ್ಸಿನ ಸಂತೋಷ ಇಮ್ಮಡಿಗೊಳಿಸಲಿದೆ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ಆರೋಗ್ಯ ಜೋಪಾನ.

ವೃಶ್ಚಿಕ: ವೃತ್ತಿರಂಗದಲ್ಲಿ ಕಾರ್ಯಬಾಹುಳ್ಯ ಅಧಿಕವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಸಂತಾನಹೀನ ದಂಪತಿ ದೇವರ ಮೊರೆ ಹೋಗಲಿದ್ದಾರೆ. ದಾಯಾದಿ ಕಲಹಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ಭೂಮಿ, ವಾಹನ ಖರೀದಿ ವಿಚಾರವನ್ನು ಕೆಲವು ದಿನ ಮುಂದೂಡುವುದು ಒಳಿತು. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಇಷ್ಟಮಿತ್ರರೊಂದಿಗೆ ಕಿರು ಸಂಚಾರ ಮಾಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕುಂಭ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ವಿದೇಶಯಾನ ಮಾಡುವ ಸಂದರ್ಭ ಬಂದೀತು. ಶುಭ ಮಂಗಲ ಕಾರ್ಯಗಳು ಸಾಂಗವಾಗಿ ನೆರವೇರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಮಹಿಳೆಯರಿಗೆ ವಿಶ್ರಾಂತಿ ಸಿಗಲಿದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಸಿಗಬೇಕಾದ ಸ್ಥಾನ ಸಿಗುತ್ತಿಲ್ಲ ಎಂಬ ಬೇಸರ ಕಾಡಲಿದೆ. ಸಾಲ ಮಾಡಿಯಾದರೂ ತುಪ್ಪ ತಿನ್ನುವ ಆಸೆಯಾದೀತು. ತಾಳ್ಮೆ, ಸಂಯವಿರಲಿ. ಬೇರೆಯವರ ವಿಚಾರಕ್ಕೆ ಮೂಗು ತೂರಿಸಲು ಹೋಗಬೇಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ