ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 11 ಮಾರ್ಚ್ 2021 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವವರ ಬಗ್ಗೆ ಹುಷಾರಾಗಿರಿ. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ಪಾವತಿಯಾಗಲಿದೆ. ಸಾಂಸಾರಿಕವಾಗಿ ಬೇಡದ ಮಾತುಗಳಿಂದ ಮನಸ್ಸು ಹಾಳಾದೀತು. ತಾಳ್ಮೆ, ಸಂಯವಿರಲಿ.

ವೃಷಭ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ ಕೂಡಿಬರಲಿದೆ. ಸ್ಥಾನ ಮಾನ ವೃದ್ಧಿಯಾಗಲಿದೆ. ಆದರೆ ನಿಮ್ಮ ಸಂಗಾತಿಯ ಮುನಿಸಿಗೆ ಕಾರಣವಾಗಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಭೇಟಿ ಯೋಗ.

ಮಿಥುನ: ಕೋಪದ ಭರದಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಫಲ ದೊರೆಯದು. ಇಷ್ಟ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ಇನ್ನೊಬ್ಬರ ಮೇಲೆ ಅತಿಯಾಗಿ ಅವಲಂಬಿಸುವುದು ಉತ್ತಮ ಲಕ್ಷಣವಲ್ಲ. ನಿಮ್ಮ ನಿರ್ಧಾರಗಳನ್ನು ನೀವೇ ತೆಗೆದುಕೊಳ್ಳಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಅಧಿಕ ಓಡಾಟದಿಂದ ದೇಹಾಯಾಸವಾದೀತು. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.

ಕನ್ಯಾ: ಸಾಮಾಜಿಕ ರಂಗದಲ್ಲಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆದಾಯ ವೃದ್ಧಿಯಾಗಲಿದೆ. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಗೆಡಿಸಲಿವೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಕೆಲವು ದಿನ ಕಾಯುವುದು ಒಳಿತು.

ತುಲಾ: ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಂತು ಹೋಗಲಿವೆ. ಆರ್ಥಿಕವಾಗಿ ಹಣಕಾಸಿನ ಅಡಚಣೆ ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ವೃಶ್ಚಿಕ: ನಿಮ್ಮ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ.

ಧನು: ಯೋಗ್ಯ ವಯಸ್ಕರು ಸೂಕ್ತ ಸಂಗಾತಿಯನ್ನು ಹುಡುಕಲಿದ್ದಾರೆ. ಮನಸ್ಸಿನ ಮಾತುಗಳಿಗೆ ಬೆಲೆಕೊಡಿ. ಕ್ರಿಯಾತ್ಮಕ ಕೆಲಸಗಳಿಂದ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಮಕರ: ವ್ಯಾವಹಾರಿಕವಾಗಿ ಲಾಭದಾಯಕ ದಿನಗಳಿವು. ಆದರೆ ನಯವಂಚಕರ ಮಾತಿಗೆ ಮರುಳಾಗಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಮನಸ್ಸಿನಲ್ಲಿ ಕೊರೆಯುತ್ತಿದ್ದ ಯೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕ ವರ್ಗದವರ ಪ್ರಶಂಸೆಗೊಳಗಾಗಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಧಾರ್ಮಿಕ ಕೆಲಸಗಳಿಗಾಗಿ ಸಂಚಾರ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚ ಅನಿವಾರ್ಯ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡದಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ