ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 5 ಮೇ 2021 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಹಳ ದಿನಗಳ ನಂತರ ನಿಮ್ಮ ದೈನಂದಿನ ಬದುಕಿಗೆ ಮರಳಿದ ಖುಷಿ ನಿಮ್ಮದಾಗಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಹಿನ್ನಡೆಯಾದರೂ, ಚಿಂತೆ ಬೇಡ.

ವೃಷಭ: ಹಾಸಿಗೆ ಇದ್ದಷ್ಟೇ ಕಾಲು ಚಾಚುವ ಪರಿಸ್ಥಿತಿ ನಿಮ್ಮದಾಗಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಕೆಲಸದಲ್ಲಿ ಮುನ್ನಡೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಹಣಕಾಸಿನ ವ್ಯವಹಾರ ನಡೆಸುವಾಗ ಎಚ್ಚರಿಕೆ ಅಗತ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳಿಗೆ ಶುಭ ದಿನವಾಗಲಿದೆ.

ಸಿಂಹ: ನಿಮ್ಮದಲ್ಲದ ವಸ್ತುವಿನ ಮೇಲೆ ಅತಿಯಾದ ವ್ಯಾಮೋಹ ತೊಂದರೆಗೆ ಕಾರಣವಾದೀತು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರಿಗಳಿಗೆ ಏರುಪೇರುಗಳು ಸಹಜ. ತಾಳ್ಮೆಯಿಂದ ನಿಭಾಯಿಸಿ.

ಕನ್ಯಾ: ನಿಮ್ಮ ಕೌಟುಂಬಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಕಿರು ಓಡಾಟ ನಡೆಸುವಿರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ವಾಹನ ಸಂಚಾರದಲ್ಲಿ ಅತೀವ ಕಾಳಜಿ ಮುಖ್ಯ. ಮನೆಗೆ ಅತಿಥಿಗಳ ಆಗಮನವಾದೀತು. ಹಿರಿಯರೊಂದಿಗೆ ಅನವಶ್ಯಕ ವಾದ ವಿವಾದ ಬೇಡ.

ವೃಶ್ಚಿಕ: ನಿಮ್ಮ ಏಳಿಗೆಗಾಗಿ ಕ್ರಿಯಾತ್ಮಕವಾಗಿ ಯೋಚಿಸಬೇಕಾದ ಸಮಯವಿದು. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಹಿರಿಯರ ಸಲಹೆಗಳನ್ನು ಪಾಲಿಸಿ. ದಿನದಂತ್ಯಕ್ಕೆ ನೆಮ್ಮದಿ.

ಧನು: ವ್ಯಾವಹಾರಿಕವಾಗಿ ಮುನ್ನಡೆಯಿದ್ದರೂ ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಘರ್ಷಣೆಯಾದೀತು. ಮಾತಿನ ಮೇಲೆ ಸಂಯಮವಿರಲಿ. ಮಕ್ಕಳ ದೇಹಾರೋಗ್ಯದ ಕಡೆಗೆ ಗಮನ ಹರಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಮಕರ: ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾದೀತು. ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಬಹುದಿನಗಳಿಂದ ಕಾಡುತ್ತಿದ್ದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಾರ್ಮಿಕ ವರ್ಗ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾದೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.

ಮೀನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಅಧಿಕಾರಿ ವರ್ಗದವರಿಗೆ ಮುಂಬಡ್ತಿಯ ಯೋಗ ಕೂಡಿಬರಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ