ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 7 ಮೇ 2021 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಪರಿಶ್ರಮ ಪರಿಣಾಮ ನಿಮಗೆ ವೃತ್ತಿರಂಗದಲ್ಲಿ ಏಳಿಗೆ ಸಿಗಲಿದೆ. ಆದರೆ ಮೇಲಧಿಕಾರಿಗಳ ಅಸಹಕಾರ ಅಸಹನೆ ತಂದೀತು. ಸಾಂಸಾರಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ತಾಳ್ಮೆಯಿಂದ ನಿಭಾಯಿಸಿಕೊಳ್ಳಬೇಕಾಗುತ್ತದೆ.

ವೃಷಭ: ಆಕಸ್ಮಿಕವಾಗಿ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಉದಾಸೀನತೆ ಸಲ್ಲದು. ದೈವಾನುಗ್ರಹದಿಂದ ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ಚಿಂತೆ ಬೇಡ.

ಮಿಥುನ: ಅನಿರೀಕ್ಷಿತವಾಗಿ ನಿಮ್ಮ ಕಾರ್ಯ ಸಾಧನೆಯಾಗಲಿದೆ. ಅಪರಿಚಿತರಿಂದ ಸಹಾಯವಾದೀತು. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಾಳಜಿಯಿರಲಿ.

ಕರ್ಕಟಕ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ತೋರಿಬರಲಿದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವೇ ಲೇಸು ಎನಿಸೀತು.

ಸಿಂಹ: ಮಾನಸಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಂಡು ಪರಿಹಾರ ಪಡೆಯಲಿದ್ದೀರಿ. ಕ್ರೀಡಾಪಟುಗಳಿಗೆ ನಿರೀಕ್ಷಿತ ಫಲ ಸಿಗಲಾರದು. ಸಕಾರಾತ್ಮಕವಾಗಿ ಯೋಚಿಸಿದರೆ ಪರಿಹಾರ ಸಿಗುವುದು.

ಕನ್ಯಾ: ಮಕ್ಕಳ ಭವಿಷ್ಯದ ವಿಚಾರದಲ್ಲಿ ಕಾರ್ಯಪ್ರವೃತ್ತರಾಗಲಿದ್ದೀರಿ. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ದೂರ ಪ್ರಯಾಣ ಅನಿವಾರ್ಯವಾಗಿ ರದ್ದು ಮಾಡಲಿದ್ದೀರಿ. ಆಕಸ್ಮಿಕ ಧನಲಾಭವಾಗಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದಾಯಾದಿ ಕಲಹಗಳ ಪರಿಹಾರಕ್ಕೆ ಹಿರಿಯರ ಸಲಹೆ ಪಡೆಯಿರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ವೃಶ್ಚಿಕ: ಯಶಸ್ಸಿನ ಗುಂಗಿನಲ್ಲಿ ಮೈಮರೆಯದೇ ಕಠಿಣ ಪರಿಶ್ರಮದಲ್ಲಿ ತೊಡಗಿಸಿಕೊಳ್ಳಿ. ಹಿರಿಯರಿಗೆ ಸಮಾಜಮುಖೀ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಧನು: ಕ್ರೀಡಾ ವೃತ್ತಿಯವರಿಗೆ ಹಿನ್ನಡೆಯಾದೀತು. ವೃತ್ತಿರಂಗದಲ್ಲಿ ಪೈಪೋಟಿಯ ವಾತಾವರಣವಿರಲಿದೆ. ನೂತನ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ಮಕರ: ಬೇರೆಯವರು ನಿಮ್ಮ ಬಗ್ಗೆ ಏನು ಯೋಚಿಸುವರೋ ಎಂಬ ಕೀಳರಿಮೆ ಬೇಡ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಕೃಷಿಕರಿಗೆ ವ್ಯವಹಾರಕ್ಕೆ ತೊಡಕುಂಟಾದೀತು.

ಕುಂಭ: ಮನಸ್ಸಿನ ಮಾತುಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಿ. ಅತಿಯಾಗಿ ನಯ ವಿನಯದಿಂದ ವರ್ತಿಸುವವರಿಂದ ವಂಚನೆಯಾದೀತು, ಎಚ್ಚರಿಕೆಯಿರಲಿ. ಸಾಂಸಾರಿಕವಾಗಿ ಸುಖ ಸಮೃದ್ಧಿಗೆ ಕೊರತೆಯಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಆಗಾಗ ಧನಾಗಮನದಿಂದ ಕೊಂಚ ಚೇತರಿಕೆ ಕಂಡುಬರಲಿದೆ. ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಆತ್ಮೀಯರ ಸಹಕಾರ ಕಂಡುಬರಲಿದೆ. ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ