ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 2 ಜುಲೈ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಈ ಹಿಂದೆ ಕೊಟ್ಟ ಭರವಸೆಗಳು ಪೂರ್ತಿಯಾಗದೇ ನಿರಾಸೆಯಾದೀತು. ಆರ್ಥಿಕವಾಗಿ ಧನಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಪೂರಕ ಅವಕಾಶಗಳು ದೊರೆಯಲಿವೆ.

ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ನಿಮ್ಮ ಯೋಗ ನನಸಾಗಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತೋಷ ಹೆಚ್ಚಲಿದೆ. ದೇಹಾರೋಗ್ಯದ ಬಗ್ಗೆ ಅನಾದರಣೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಅರ್ಧಕ್ಕೇ ನಿಂತ ಕೆಲಸಗಳನ್ನು ಪೂರ್ತಿ ಮಾಡುವುದರತ್ತ ಗಮನ ಹರಿಸಿ. ಯೋಗ್ಯ ವಯಸ್ಕರಿಗೆ ಶೀಘ್ರ ಸೂಕ್ತ ವೈವಾಹಿಕ ಸಂಬಂಧಗಳು ಒದಗಿಬರಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ನಿಮ್ಮ ಜೀವನದಲ್ಲಿ ಹಿತ ಶತ್ರುಗಳ ಕಾಟ ಅತಿಯೆನಿಸಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಿಬರಲಿದೆ. ಹಿರಿಯರೊಂದಿಗೆ ಸಮಾಲೋಚನೆ ನಡೆಸಿ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಸಿಂಹ: ವೃತ್ತಿಜೀವನದಲ್ಲಿ ಅಭಿವೃದ್ಧಿ ಯೋಗ ಕಂಡುಬರಲಿದೆ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ಸಿಗುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಮಕ್ಕಳಿಂದ ಸಂತೋಷ ಸಿಗಲಿದೆ.

ಕನ್ಯಾ: ದೇಹಾರೋಗ್ಯದಲ್ಲಿ ಇದುವರೆಗೆ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ಪತ್ನಿಯ ವಿಚಾರ ಧಾರೆಗಳಿಗೆ ಮನ್ನಣೆ ಕೊಡಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದ ಬೇಡ.

ತುಲಾ: ನೀವು ಅಂದುಕೊಂಡಂತೇ ಕೆಲಸಗಳು ಸಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ವಾಹನ ಸಂಚಾರ ಮಾಡುವಾಗ ಅಪಘಾತದ ಭಯ ಕಾಡೀತು. ಧಾರ್ಮಿಕ ಕಾರ್ಯಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅನಗತ್ಯ ಚಿಂತೆಗೆ ಕಡಿವಾಣವಿರಲಿ.

ವೃಶ್ಚಿಕ: ಪರ ದೂಷಣೆ, ಚಾಡಿ ಮಾತುಗಳು ಕೇಳಿಬಂದೀತು. ನಿಮ್ಮ ಬಗ್ಗೆ ಇತರರು ಏನಂದುಕೊಳ್ಳುವರೋ ಎಂದು ಅತಿಯಾಗಿ ಚಿಂತಿಸದಿರಿ. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಉತ್ತಮ.

ಧನು: ನಿಮ್ಮ ಪ್ರೀತಿ ಪಾತ್ರ ವಸ್ತುವನ್ನು ಕಳೆದುಕೊಂಡ ದುಃಖ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಕ್ಕಿಳಿಯದಿರಿ. ಮಕ್ಕಳ ಅಭಿಲಾಷೆ ಈಡೇರಿಸಲು ಮುಂದಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಬಹುವಾಗಿ ಕಾಡುತ್ತಿದ್ದ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವೈಯಕ್ತಿಕ ನಿಂದನೆಗೆ ಅವಕಾಶ ಕೊಡಬೇಡಿ. ಮಹಿಳೆಯರಿಗೆ ಪ್ರಿಯ ಜನರನ್ನು ಭೇಟಿಯಾಗುವ ಯೋಗ. ಚಿಂತೆ ಬೇಡ.

ಕುಂಭ: ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳದಿದ್ದರೆ ಸಂಘರ್ಷಗಳಾದೀತು. ಸಾಮಾಜಿಕವಾಗಿ ನಿಮ್ಮ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಫಲಗಳು ಸಿಗಲಿದೆ. ತಾಳ್ಮೆಯಿರಲಿ.

ಮೀನ: ದೈನಂದಿನ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದರಿಂದ ಚಿಂತೆ ಮರೆಯಲಿದ್ದೀರಿ. ವ್ಯಾಪಾರಿಗಳಿಗೆ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ