ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 5 ಜುಲೈ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಾರಂಭಕ್ಕೆ ಅನೇಕ ಅಡ್ಡಿ ಆತಂಕಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಕಿರಿ ಕಿರಿಯಿದ್ದರೂ ನಿಮ್ಮ ಸಂತೋಷ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ನಿರೀಕ್ಷಿಸಬಹುದು.

ವೃಷಭ: ಹಿಂದಿನ ಅನುಭವಗಳೇ ಇಂದು ನಿಮಗೆ ಪ್ರಯೋಜನಕ್ಕೆ ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಪ್ರೀತಿ ಪಾತ್ರ ವ್ಯಕ್ತಿಗಳನ್ನು ಭೇಟಿಯಾಗುವ ಯೋಗವಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ವೈಯಕ್ತಿಕವಾಗಿ ನಿಮ್ಮ ದುಃಖ ದುಮ್ಮಾನಗಳನ್ನು ಯಾರೊಂದಿಗಾದರೂ ಹಂಚಿಕೊಳ್ಳಬೇಕೆನಿಸುತ್ತದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಉತ್ತಮ ಅವಕಾಶಗಳು ಬಂದಾಗ ಸದುಪಯೋಗ ಪಡಿಸಿಕೊಳ್ಳಿ. ನಿಮಗೆ ಆಗದವರಿಂದ ದೂರವಿದ್ದರೇ ಉತ್ತಮ. ಹಿರಿಯರೊಂದಿಗೆ ವಿನಾಕಾರಣ ಸಂಘರ್ಷ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಇಚ್ಛಿತ ಕೆಲಸಗಳು ಅಂದುಕೊಂಡ ರೀತಿಯಲ್ಲೇ ಸಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ವೆಚ್ಚವಾಗಲಿದೆ.

ಕನ್ಯಾ: ಬಹುದಿನಗಳಿಂದ ಕಾಡುತ್ತಿದ್ದ ನಿಮ್ಮ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗುವುದು. ಹಿರಿಯರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಇತರರ ಮೇಲೆ ನಿಮಗಿರುವ ಕಾಳಜಿಯನ್ನು ಪ್ರಕಟಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆಯ ಯೋಗವಿದೆ. ಹೊಸ ಅವಕಾಶಗಳು ಬರಲಿದ್ದು, ಸರಿಯಾಗಿ ಬಳಸಿಕೊಳ್ಳಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಸಾಂಸಾರಿಕವಾಗಿ ಸಂತೋಷದ ಕ್ಷಣಗಳಿರಲಿವೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಧನು: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಸಾಂಸಾರಿಕವಾಗಿ ಅನಗತ್ಯ ಯೋಚನೆಗಳಿಂದ ನಿಮ್ಮ ಮನಸ್ಸಿನ ನೆಮ್ಮದಿ ಹಾಳಾದೀತು. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿರಲಿ.

ಮಕರ: ನಿಮ್ಮ ಮನಸ್ಸಿನ ಮಾತಿನಂತೆ ನಡೆದುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಇತರರಿಗೆ ನಿಮ್ಮ ನಿರ್ಧಾರಗಳು ಇಷ್ಟವಾಗದೇ ಹೋಗಬಹುದು. ಮಹಿಳೆಯರಿಗೆ ಬಹುದಿನಗಳ ಕನಸು ನನಸಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವ ವಾತಾವರಣ ಕಂಡುಬರಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ  ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಕೌಟುಂಬಿಕವಾಗಿ ಹಿರಿಯರೊಂದಿಗೆ ಕೆಲವೊಂದು ವಿಚಾರಕ್ಕೆ ರಾಜಿ ಮಾಡಬೇಕಾಗುತ್ತದೆ.

ಮೀನ: ಕೃಷಿಕರಿಗೆ ವ್ಯವಹಾರಕ್ಕೆ ಅಡ್ಡಿ ಆತಂಕಗಳು ಎದುರಾದೀತು. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬಂದೀತು. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ