ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 3 ಡಿಸೆಂಬರ್ 2021 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆಗಬೇಕಾದ ಕೆಲಸಗಳ ಬಗ್ಗೆ ಮೀನಮೇಷ ಎಣಿಸುತ್ತಾ ಕೂತರೆ ಸಾಲದು. ಕಾರ್ಯೋನ್ಮುಖರಾಗುವತ್ತ ಗಮನ ಕೊಡಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಧನಾಗಮನವಾಗಲಿದೆ.

ವೃಷಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ಮೋಹ ಬೇಡ. ಹಳೆಯ ಸಂಬಂದಗಳು ಮತ್ತೆ ಚಿಗುರಿಕೊಳ್ಳಲಿವೆ. ನೀರು-ಬೆಂಕಿಯೊಂದಿಗೆ ಎಚ್ಚರಿಕೆಯಿಂದಿರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಮಾನಸಿಕ ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಪರ ಸ್ಥಳಗಳಿಗೆ ಕಾರ್ಯನಿಮಿತ್ತ ಸಂಚಾರ ಮಾಡಬೇಕಾದೀತು. ಹೊಸ ಜನರಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಯಂತ್ರೋಪಕರಣಗಳ ವೃತ್ತಿಯವರು ಅಪಘಾತವಾಗದಂತೆ ಎಚ್ಚರಿಕೆ ವಹಿಸಬೇಕು.

ಸಿಂಹ: ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ದುಡಿಮೆಯಿಂದ ದೇಹಾಯಾಸವಾದೀತು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಇಷ್ಟ ಭೋಜನ ಮಾಡುವ ಯೋಗ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕನ್ಯಾ: ವೃತ್ತಿರಂಗದಲ್ಲಿ ನೀವೇ ಬಾಸ್ ಆಗಿರಲಿದ್ದೀರಿ. ನಿಮ್ಮ ಕ್ರಿಯಾತ್ಮಕತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ತಾಳ್ಮೆಯಿರಲಿ.

ತುಲಾ: ನಿಮ್ಮ ತಪ್ಪನ್ನು ಬೇರೆಯವರ ಮೇಲೆ ಹೊರಿಸುವ ಪ್ರಯತ್ನ ಮಾಡದಿರಿ. ಮಾತಿನ ಮೇಲೆ ನಿಗಾ ಅಗತ್ಯ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಹೊಸ ಜೀವನ, ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟವೆನಿಸಬಹುದು. ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಧನು: ವೈಯಕ್ತಿಕ ಜೀವನದ ಕಷ್ಟ-ನಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿಯಲು ಪ್ರಯತ್ನಿಸಲಿದ್ದಾರೆ. ಸಾಂಸಾರಿಕ ವಿಚಾರಗಳನ್ನು ನಾಜೂಕಾಗಿ ನಿಭಾಯಿಸಬೇಕು.

ಮಕರ: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆದುಕೊಳ್ಳುವುದು ಉತ್ತಮ. ಮನಸ್ಸಿಗೆ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ.

ಕುಂಭ: ಮಕ್ಕಳಿಗೆ ವೈವಾಹಿಕ ಸಂಬಂಧಗಳಿಗಾಗಿ ಪ್ರಯತ್ನ ನಡೆಸಲಿದ್ದೀರಿ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಸಾಂಸಾರಿಕವಾಗಿ ನಿಮ್ಮ ನಿರ್ಧಾರಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ.

ಮೀನ: ಪ್ರಯತ್ನವಿಲ್ಲದೇ ಫಲ ಸಿಗದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ