ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 6 ಡಿಸೆಂಬರ್ 2021 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ದೇಹಾರೋಗ್ಯದಲ್ಲಿ ವೃದ್ಧಿ ಕಂಡುಬರುವುದು. ಹಳೆಯ ಮಿತ್ರರ ಸಮಾಗಮವಾದೀತು. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಕಿವಿಗೊಡಬೇಕಾಗಿಲ್ಲ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.

ಮಿಥುನ: ಹೊಸದಾಗಿ ಉದ್ಯೋಗ ಆರಂಭಿಸಿದವರಿಗೆ ಒಳ್ಳೆಯ ದಿನಗಳು. ಸಹೋದ್ಯೋಗಿಗಳಿಂದು ಉತ್ತಮ ಸಹಕಾರ ಕಂಡುಬರಲಿದೆ. ಭೂಮಿ, ವಾಹನಾದಿ ಖರೀದಿ ವಿಚಾರದಲ್ಲಿ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ.

ಕರ್ಕಟಕ: ವ್ಯವಹಾರ ನಿಮಿತ್ತ ಅನ್ಯ ಊರಿಗೆ ಪ್ರಯಾಣ ಮಾಡಬೇಕಾಗಿ ಬಂದೀತು. ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ಹರಿವಿಗೆ ಸಮಸ್ಯೆಯಾಗದು.

ಸಿಂಹ: ವೃತ್ತಿರಂಗದಲ್ಲಿ ಹೊಸ ಅವಕಾಶಗಳು ತೋರಿಬರಲಿವೆ. ಪಾಲಿಗೆ ಬಂದಿದ್ದನ್ನು ಸರಿಯಾಗಿ ಬಳಸಿಕೊಳ್ಳಲು ಕಲಿಯಬೇಕು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆ.

ಕನ್ಯಾ: ನಿಮ್ಮ ಕಾರ್ಯಕ್ಷೇತ್ರದಲ್ಲಿ ನೀವೇ ಬಾಸ್ ಆಗಿರಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನಾದಿಗಳು ಹೆಚ್ಚಲಿವೆ. ಕೃಷಿಕರಿಗೆ ಸಮಾಧಾನಕರ ವಾತಾವರಣ. ಪಾಲುದಾರಿಕೆ ವ್ಯವಹಾರದಲ್ಲಿ ಚೇತರಿಕೆ ಕಂಡುಬಂದೀತು.

ತುಲಾ: ದೇಹಾರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು.

ವೃಶ್ಚಿಕ: ಧಾರ್ಮಿಕ ಕೆಲಸಗಳಲ್ಲಿ ತನ್ಮಯತೆ, ಮಾನಸಿಕವಾಗಿ ನೆಮ್ಮದಿ ಕಂಡುಬಂದೀತು. ಸಂಗಾತಿಯ ಕಷ್ಟಗಳಿಗೆ ಸಾಥ್ ಕೊಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಂಡುಬರುವುದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ.

ಧನು: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಧನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನೆರೆಹೊರೆಯವರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಕೊಂಚ ಎಚ್ಚರಿಕೆ ತಪ್ಪಿದರೂ ನಷ್ಟ ಸಂಭವಿಸುವ ಭೀತಿ. ಉದ್ಯೋಗ ನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ಧನಾಗಮನಕ್ಕೆ ಕೊರತೆಯಿರದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ.

ಕುಂಭ: ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮನವಾದೀತು. ತಾಳ್ಮೆಯಿರಲಿ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಕಾರ್ಯದೊತ್ತಡ ಕಂಡುಬಂದೀತು. ಉನ್ನತ ಸ್ಥಾನಕ್ಕಾಗಿ ಖರ್ಚು ವೆಚ್ಚ ಮಾಡಬೇಕಾಗಿ ಬಂದೀತು. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖಕ್ಕೆ ಕೊರತೆಯಾಗದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ