ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 18 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾವಹಾರಿಕ ವಿಚಾರದಲ್ಲಿ ನಿಮ್ಮ ಕೈ ಮೇಲಾಗಲಿದೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸದೇ ಇದ್ದರೆ ಸಂಬಂಧಗಳು ಹಾಳಾದೀತು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಇತರರು ನಿಮ್ಮಿಂದ ಮಹತ್ತರವಾದದ್ದನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಕಠಿಣ ಪರೀಕ್ಷೆ ಎದುರಾಗಲಿದೆ.

ಮಿಥುನ: ಯಂತ್ರೋಪಕರಣಗಳ ಕೆಲಸ ಮಾಡುವಾಗ ಅಪಘಾತದ ಭಯವಿದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ಗಳಿಕೆಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು.

ಸಿಂಹ: ಪ್ರಥಮ ಭೇಟಿಯಿಂದಲೇ ಇತರರಿಗೆ ನೀವು ಇಷ್ಟವಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಚತುರತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಗೃಹಿಣಿಯರಿಗೆ ಉಲ್ಲಾಸದಾಯಕ ದಿನ ಇದಾಗಿರಲಿದೆ.

ಕನ್ಯಾ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬರುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಮಾನಸಿಕ ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ತುಲಾ: ವಿನೂತನ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಉದ್ಯೋಗ ನಿಮಿತ್ತ ಸಂಚಾರ ಮಾಡಬೇಕಾಗುತ್ತದೆ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರಗಳಲ್ಲಿ ವಿಶೇಷ ಮುನ್ನಡೆ ಕಂಡುಬರುವುದು. ಪ್ರೇಮಿಗಳಿಗೆ ಇಂದು ಶುಭ ದಿನವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಬಂದಾಗ ಹಿರಿಯರಿಂದ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳು ಹೊಸ ಪ್ರಯೋಗಕ್ಕೆ ಮುಂದಾಗಲಿದ್ದೀರಿ.

ಮಕರ: ಮಾತು ಕಡಿಮೆ ಮಾಡಿ ಕೆಲಸದ ಬಗ್ಗೆ ಹೆಚ್ಚು ಗಮನ ಕೊಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮನೆಯಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸ್ವಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ತಾಳ್ಮೆಯಿರಲಿ.

ಕುಂಭ: ಹಿಂದೆ ಹೂಡಿದ್ದ ಬಂಡವಾಳಗಳಿಗೆ ತಕ್ಕ ಬೆಲೆ ಸಿಗಲಿದೆ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರೈಸಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಇಷ್ಟಮಿತ್ರರನ್ನು ಭೇಟಿಯಾಗಿ ಇಷ್ಟಭೋಜನ ಮಾಡುವ ಯೋಗ. ದೇಹಾರೋಗ್ಯದ ಸಮಸ್ಯೆಗಳನ್ನು ಉಪೇಕ್ಷಿಸುವುದು ಬೇಡ. ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ