ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 28 ಫೆಬ್ರವರಿ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಇನ್ನೊಬ್ಬರ ಅತಿಯಾದ ಕಾಳಜಿಯೂ ಕಿರಿ ಕಿರಿ ಉಂಟುಮಾಡಬಹುದು. ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರು ಕೊಡುವ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಗುರುಹಿರಿಯರ ಆಶೀರ್ವಾದದೊಂದಿಗೆ ಹೊಸ ಕೆಲಸಗಳಿಗೆ ಕೈಹಾಕಲಿದ್ದೀರಿ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಕಾರ್ಯರಂಗದಲ್ಲಿ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಅನಿವಾರ್ಯ ಕಾರಣಗಳಿಗೆ ಅನ್ಯ ಊರಿಗೆ ಸಂಚರಿಸುವ ಸಂದರ್ಭ ಎದುರಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ಚಿಂತೆ ಬೇಡ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಭೂಮಿ, ವಾಹನ ಖರೀದಿ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಸಿಂಹ: ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದರೆ ಹೊಂದಾಣಿಕೆ ಕೊರತೆ ಕಾಡೀತು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಉನ್ನತಿ ಕಂಡುಬರಲಿದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದೀರಿ. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಿಮಗೆ ಅತ್ಯಂತ ಪ್ರಿಯವೆನಿಸಿದ್ದ ವಸ್ತುಗಳನ್ನು ಕಳೆದುಕೊಳ್ಳುವ ನೋವು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಮನಸ್ಸಿಗೆ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಮನಸ್ಸಿಗೆ ಹಿಡಿಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆಯಿರಲಿ.

ಧನು: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ.

ಮಕರ: ಕೈಗೊಳ್ಳುವ ಕೆಲಸದಲ್ಲಿ ನಿಮ್ಮ ಪರಿಶ್ರಮ ಎದ್ದು ಕಾಣಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಂಸಾರಿಕವಾಗಿ ಸುಂದರ ದಿನಗಳಾಗಿರಲಿವೆ. ಸಂತೋಷ, ನೆಮ್ಮದಿಯಿರಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅನುಕೂಲವಾದ ವಾತಾವರಣವಿರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಚಿಂತೆ ಬೇಡ.

ಮೀನ: ಮಹಿಳಾ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ