ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 22 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ್ಯತೆ. ನಿಮ್ಮ ಇಷ್ಟ ಕಷ್ಟಗಳಿಗೆ ಸಂಗಾತಿಯ ಸಾಥ್ ಸಿಗದೇ ನಿರಾಸೆಯಾದೀತು. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ.

ವೃಷಭ: ಹಿರಿಯರ ಅಭಿಪ್ರಾಯಕ್ಕೆ ಬೆಲೆ ಕೊಡುವುದು ಮುಖ್ಯ. ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಸರಕಾರಿ ಕೆಲಸಗಳಲ್ಲಿ ಓಡಾಟವಿದ್ದರೂ ಜಯ ನಿಮ್ಮದಾಗಲಿದೆ. ಕಾಗದ ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ.

ಮಿಥುನ: ಸರಿಯಾದ ಸಮಯ ಬಂದಾಗ ಆಗಬೇಕಾದ ಕೆಲಸ ಆಗಿಯೇ ತೀರುತ್ತದೆ ಎಂಬ ನಂಬಿಕೆಯಿರಲಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳಿತಾಗುವುದು. ತಾಳ್ಮೆ, ಸಂಯಮವಿರಲಿ.

ಕರ್ಕಟಕ: ಆರ್ಥಿಕವಾಗಿ ಉನ್ನತಿಗೇರುವ ಅವಕಾಶ ನಿಮ್ಮದಾಗಲಿದೆ. ಆದರೆ ಸರಿಯಾದ ಯೋಜನೆಯಿಲ್ಲದೇ ಹೋದಲ್ಲಿ ದುಡಿದಿದ್ದು ವ್ಯರ್ಥವಾದೀತು. ಸಂಗಾತಿಯ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಉತ್ತಮ.

ಸಿಂಹ: ಅಂದುಕೊಂಡಿದ್ದನ್ನು ಸಾಧಿಸಲು ಕೆಲವೊಂದು ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ವಿಶೇಷ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿರಲಿದೆ.

ಕನ್ಯಾ: ಬಹಳ ದಿನಗಳ ನಂತರ ನಿಮ್ಮ ಮೆಚ್ಚಿನ ಸ್ನೇಹಿತರನ್ನು ಭೇಟಿಯಾದ ಸಂತೋಷ ಸಿಗುವುದು. ಉದ್ಯೋಗ ಬದಲಾವಣೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ತುಲಾ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ತಾಳ್ಮೆ, ಸಂಯಮ ಅಗತ್ಯ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಕುತೂಲಹವಿರಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ನೀವು ಇಂದು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಬುನಾದಿಯಾಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಧನು: ನಿಮ್ಮ ವೃತ್ತಿರಂಗದ ಏಳಿಗೆಗೆ ಮನೆಯವರ ಸಹಕಾರ ಕಂಡುಬರುವುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸ್ವಯಂ ವ್ಯಾಪಾರಿಗಲಿಗೆ ಮುನ್ನಡೆ ಕಂಡುಬರುವುದು.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳಿಗೆ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನ ವಿನಿಯೋಗಿಸಲಿದ್ದೀರಿ.

ಕುಂಭ: ಹಿರಿಯರಿಗೆ ಪುಣ್ಯಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಸದುಪಯೋಗಕ್ಕಾಗಿ ಧನವಿನಿಯೋಗವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ