ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 8 ಮೇ 2022 (08:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಂದ ಪರಿಹಾರ ಪಡೆಯಲು ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಶತ್ರು ಪೀಡೆ ನಾಶವಾದೀತು. ಸಾಂಸಾರಿಕವಾಗಿ ಮಾತಿನ ಮೇಲೆ ನಿಗಾ ಇರಲಿ. ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ಎಚ್ಚರಿಕೆ ವಹಿಸಬೇಕು. ಆರ್ಥಿಕವಾಗಿ ಉನ್ನತ ಸ್ಥಾನ ಮಾನ ಯೋಗವಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ತಾಳ್ಮೆಯಿರಲಿ.

ಮಿಥುನ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲು ಅವಕಾಶ ಸಿಗುವುದು.

ಕರ್ಕಟಕ: ನಿಮ್ಮ ಕೆಲಸದ ವೈಖರಿ ನೋಡಿ ಬೇರೆಯವರೂ ಬೆರಗಾಗಲಿದ್ದಾರೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉನ್ನತ ಸ್ಥಾನಕ್ಕೇರುವ ಕನಸು ಸದ್ಯದಲ್ಲೇ ನನಸಲಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳನ್ನು ಎದುರಿಸಬೇಕಾದೀತು. ಪಾಲು ಬಂಡವಾಳ ಹೂಡಿಕೆಗೆ ಸಕಾಲ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ಸಾಂಸಾರಿಕವಾಗಿ ಸಂಗಾತಿಯಿಂದ ನಿಮ್ಮ ಕೆಲಸಗಳಿಗೆ ಸಾಥ್ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವಿದ್ಯಾರ್ಥಿಗಳು ಪೋಷಕರಿಗೆ ಹೆಮ್ಮೆಯಾಗುವ ರೀತಿಯಲ್ಲಿ ಸಾಧನೆ ಮಾಡಲಿದ್ದಾರೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ವೃಶ್ಚಿಕ: ವ್ಯಾವಹಾರಿಕವಾಗಿ ಅಡ್ಡಿ ಆತಂಕಗಳು ಇದ್ದರೂ ಅಂತಿಮ ಜಯ ನಿಮ್ಮದಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಮಹಿಳೆಯರಿಗೆ ಚಿನ್ನಾಭರಣಗಳನ್ನು ರಕ್ಷಿಸುವ ಜವಾಬ್ಧಾರಿ ಹೆಗಲಿಗೇರಲಿದೆ.

ಧನು: ನಿಮ್ಮ ವಿಚಾರಧಾರೆಗಳನ್ನೇ ಇತರರು ಪಾಲಿಸಬೇಕೆಂಬ ಹಠವಾದಿ ಮನೋಭಾವ ಬಿಡಿ. ಮಕ್ಕಳ ಬಗ್ಗೆ ಅನಗತ್ಯ ಚಿಂತೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು.

ಮಕರ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಯಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಇನ್ನೊಬ್ಬರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಬೇಡ. ತಾಳ್ಮೆಯಿರಲಿ.

ಕುಂಭ: ವ್ಯಾಪಾರ ನಿಮಿತ್ತ ಸಾಲ ಮಾಡಿಕೊಂಡಿದ್ದರೆ ತೀರಿಸುವ ಚಿಂತೆ ಕಾಡೀತು. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ.

ಮೀನ: ನಿಮ್ಮೊಳಗಿನ ಆಸಕ್ತಿ, ಅಭಿರುಚಿಗಳನ್ನು ಪ್ರಕಟಿಸಲು ವೇದಿಕೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಪ್ರಾಪ್ತಿಯಾಗಲಿದೆ. ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ