ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 17 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯರಂಗದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗದೇ ನಿರಾಸೆಯಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ದುಂದು ವೆಚ್ಚ ಬೇಡ.

ವೃಷಭ: ಹಳೆಯ ತಪ್ಪುಗಳ ಬಗ್ಗೆ ಪಶ್ಚಾತ್ತಾಪವಾಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.

ಮಿಥುನ: ನಿಮ್ಮ ಪ್ರಯತ್ನಗಳಿಗೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಸಹೋದ್ಯೋಗಿಗಳ ಸಹಾಯ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ನಿಮ್ಮದಾಗಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಆದಾಯ ಹೆಚ್ಚಳವಾಗಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು.

ಕನ್ಯಾ: ದೂರದ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಪಾಲು ಬಂಡವಾಳ ಹೂಡಿಕೆಗೆ ಮನಸ್ಸು ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಗೆ ಕೊರತೆಯಾಗದು.

ತುಲಾ: ಯಾವುದೇ ಕೆಲಸ ಆರಂಭಿಸುವ ಮುನ್ನ ಗುರುಹಿರಿಯರ ಪ್ರಾರ್ಥನೆ ಮಾಡುವುದು ಉತ್ತಮ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ನಿಮ್ಮ ಜೊತೆ ಮುನಿಸಿಕೊಂಡಿದ್ದ ಆಪ್ತರೊಂದಿಗೆ ಸಂಬಂಧ ಸರಿ ಹೋಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದ್ದು, ನೆಮ್ಮದಿಯಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಶ್ರಮದಾಯಕ ಕೆಲಸ ಮಾಡಬೇಕಾದ ಅನಿವಾರ್ಯತೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಮಕರ: ಯೋಚನೆ ಮಾಡುವುದು ಒಂದು, ಕಾರ್ಯರೂಪಕ್ಕೆ ತರುವುದು ಇನ್ನೊಂದು ಎಂಬ ಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಹಿರಿಯರ ಮಧ್ಯಸ್ಥಿಕೆಯಲ್ಲಿ ದಾಯಾದಿಗಳೊಂದಿಗೆ ರಾಜೀ ಸಂಧಾನ ಮಾಡಿಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಅಡೆತಡೆಗಳು ಬಂದೀತು. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೆಳೆಸಿಕೊಳ‍್ಳುವುದು ಬೇಡ. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಸಂಗಾತಿಯ ಆಯ್ಕೆ ವಿಚಾರದಲ್ಲಿ ಎಚ್ಚರವಿರಲಿ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ