ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 19 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯರಂಗದಲ್ಲಿ ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಲಿದ್ದೀರಿ. ಮನಸ್ಸು ಬಿಚ್ಚಿ ಮಾತನಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕಿರು ಸಂಚಾರ ಮಾಡುವಿರಿ.

ವೃಷಭ: ಸರಕಾರಿ ಉದ್ಯೋಗಿಗಳಿಗೆ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಗಳ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ಧಾರ್ಮಿಕ ಶ್ರದ್ಧೆ ಹೆಚ್ಚಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಸಾಮಾಜಿಕವಾಗಿ ನಿಮಗೆ ವಿಶೇಷವಾದ ಸ್ಥಾನ ಮಾನ ಸಿಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಕಾಲ ಕಳೆಯಲಿದ್ದೀರಿ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹೊಸದಾಗಿ ಉದ್ಯೋಗ ಆರಂಭಿಸಿದವರಿಗೆ ಸವಾಲುಗಳು ಎದುರಾಗಲಿವೆ.

ಕನ್ಯಾ: ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಸಿಗಲಿದೆ. ಇನ್ನೊಬ್ಬರಿಗೆ ಸಹಾಯ ಮಾಡುವಾಗ ಎಚ್ಚರಿಕೆಯಿರಲಿ. ನಯವಂಚಕರಿಂದ ದೂರವಿರುವುದೇ ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರುವುದು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮಗೆ ಸಂಬಂಧಪಡದ ವಿಚಾರದ ಬಗ್ಗೆ ವೃಥಾ ಚಿಂತೆ ಮಾಡಿ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಪಾಲುದಾರಿಕೆ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಚಿಂತೆ ಬೇಡ.

ಧನು: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಅನಗತ್ಯ ಮಾತುಗಳಿಂದ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾದೀತು. ದುಂದು  ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ಮಕರ: ಬೇರೆಯವರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಸಾಂಸಾರಿಕ ವಿಚಾರದಲ್ಲಿ ಸಹನೆ ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಕುಂಭ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಪ್ರಯೋಜನವಿಲ್ಲ. ಅರ್ಧಕ್ಕೇ ನಿಂತ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ನೆಮ್ಮದಿಗೆ ಕೊರತೆಯಿರದು. ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ದಾಯಾದಿಗಳೊಂದಿಗಿನ ಭಿನ್ನಾಭಿಪ್ರಾಯ ಸರಿಹೋಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ