ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 23 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲವೊಂದು ವಿಚಾರದಲ್ಲಿ ತಾಳ್ಮೆಯೇ ನಿಮ್ಮ ಮಂತ್ರವಾಗಲಿ. ಕೌಟುಂಬಿಕವಾಗಿ ಕಲಹಗಳಾಗದಂತೆ ಎಚ್ಚರಿಕೆ ವಹಿಸಿ. ಇಷ್ಟಭೋಜನ ಮಾಡುವ ಯೋಗವಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ತಾಳ್ಮೆ ಅಗತ್ಯ.

ವೃಷಭ: ಮನೆಯಲ್ಲಿ ನಿಮ್ಮ ಕೆಲವೊಂದು ಮಾತುಗಳಿಂದ ಸಂಬಂಧ ಹಾಳಾಗದಂತೆ ಎಚ್ಚರಿಕೆ ವಹಿಸಿ. ಸುದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಾಮಾಜಿಕವಾಗಿ ಗೌರವ, ಸ್ಥಾಮಮಾನಾದಿಗಳು ಸುಧಾರಣೆಯಾಗಲಿದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹೊಸದಾಗಿ ಆರಂಭಿಸಿದ್ದ ಕೆಲಸಗಳಲ್ಲಿ ಉನ್ನತಿಯ ಯೋಗವಿದೆ. ಇಷ್ಟವಸ್ತುಗಳ ಖರೀದಿಗಾಗಿ ಖರ್ಚುವೆಚ್ಚಗಳಾಗಲಿವೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆ ಕಂಡುಬರಲಿದೆ. ಎಲ್ಲರ ಗಮನ ಸೆಳೆಯುವಂತೆ ಕೆಲಸ ಮಾಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಸಿಂಹ: ವ್ಯಾಪಾರೀ ವರ್ಗದವರಿಗೆ ವಂಚನೆಯ ಭೀತಿ ಎದುರಾಗಲಿದೆ. ನಯವಂಚಕರಿಂದ ದೂರವಿರುವುದೇ ಉತ್ತಮ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸಾಂಸಾರಿಕವಾಗಿ ನೆಮ್ಮದಿ, ಅಭಿವೃದ್ಧಿ ಕಂಡುಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸ್ವೀಕರಿಸಬೇಕು. ತಾಳ್ಮೆ ಅಗತ್ಯ.

ವೃಶ್ಚಿಕ: ಮಾನಸಿಕವಾಗಿ ಹಳೆಯ ವಿಚಾರಗಳು ನಿಮ್ಮನ್ನು ಚಿಂತೆಗೀಡು ಮಾಡಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ವಾಹನ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆಯಿರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ್ನಗಳು ಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಉತ್ತಮವಾಗಲಿದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಬಂಧುಮಿತ್ರರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ನಿರೀಕ್ಷೆಗೂ ಮೀರಿದ ಆದಾಯವಿರಲಿದೆ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಆಪ್ತರ ಸಲಹೆ ಪಡೆಯುವುದು ಉತ್ತಮ. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ