ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 24 ಮೇ 2022 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಹಳೆಯ ವಿಚಾರಗಳನ್ನು ನೆನೆದು ಮನಸ್ಸು ಬೇಸರಗೊಳ್ಳಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ನಿಮ್ಮ ಕ್ರಿಯಾತ್ಮಕಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಾಹನ, ಆಸ್ತಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಸ್ನೇಹಿತರೊಂದಿಗೆ ಇಷ್ಟ ಸ್ಥಳಕ್ಕೆ ಭೇಟಿ ಕೊಡಲಿದ್ದೀರಿ.

ಕರ್ಕಟಕ: ಕಾರ್ಯಸಾಧನೆಗಾಗಿ ಹೆಚ್ಚಿನ ಪರಿಶ್ರಮ ಅಗತ್ಯ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಮಹಿಳೆಯರೊಂಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸರಕಾರಿ ರಂಗದಲ್ಲಿ ಕೆಲಸ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಹಿಂದೆ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ವಿದ್ಯಾರ್ತಿಗಳು ಶೈಕ್ಷಣಿಕವಾಗಿ ಉನ್ನತಿ ಪಡೆಯಲಿದ್ದಾರೆ. ಹೊಸ ಜನರ ಭೇಟಿ ಯೋಗ.

ತುಲಾ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು.

ವೃಶ್ಚಿಕ: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.  ಪಾಲುದಾರಿಕೆ ವ್ಯವಹಾರ ಮಾಡುತ್ತಿದ್ದರೆ ಲಾಭ ಕಂಡುಕೊಳ್ಳಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ.

ಧನು: ಹಳೆಯ ಶತ್ರುತ್ವ ಮರೆತು ಸಹೋದ್ಯೋಗಿಗಳೊಂದಿಗೆ ಸಂಬಂಧ ಸುಧಾರಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಇಂಜಿನಿಯರ್ ವೃತ್ತಿಯವರಿಗೆ ಮುಂಬಡ್ತಿ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿಗೆ ಅವಕಾಶ ಸಿಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಾಂಸಾರಿಕವಾಗಿ ಸಂಬಂಧಗಳು ಸುಧಾರಣೆಯಾಗಲಿದೆ. ಮನೆಗೆ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಪಾಲುದಾರಿಕೆ ವಿಚಾರದಲ್ಲಿ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಅವಿವಾಹಿತರಿಗೆ ವಿವಾಹ ಯೋಗಕ್ಕೆ ಕೆಲವು ದಿನ ಕಾಯುವುದು ಉತ್ತಮ.

ಮೀನ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಹೈರಾಣಾಗಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ