ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 21 ಜೂನ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ವ್ಯವಹಾರಗಳ ಬಗ್ಗೆ ಬೇರೆಯವರು ಸಂಶಯ ಪಟ್ಟುಕೊಳ್ಳಬಹುದು. ಕೈಗೊಳ್ಳುವ ಕಾರ್ಯಗಳಲ್ಲಿ ದೃಢತೆಯಿರಲಿ. ಗೃಹರಿಪೇರಿ ಕೆಲಸಗಳಿಗಾಗಿ ಸಣ್ಣ ಪುಟ್ಟ ಖರ್ಚುಗಳಾಗುವ ಸಾಧ್ಯತೆಯಿದೆ.

ವೃಷಭ: ವೃತ್ತಿರಂಗದಲ್ಲಿ ಮೊದಲೇ ಸಮಸ್ಯೆ ಅರಿತು ಪರಿಹಾರ ಕಂಡುಕೊಳ್ಳುವ ಜಾಣ್ಮೆ ಪ್ರದರ್ಶಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪೈಪೋಟಿ ಎದುರಾಗಲಿದೆ. ಗುರುಹಿರಿಯರಿಂದ ಲಾಭವಾಗಲಿದೆ. ಕೌಟುಂಬಿಕವಾಗಿ ಸುಖ, ನೆಮ್ಮದಿ ದೊರೆಯಲಿದೆ. ಸಂಗಾತಿಯ ಹಿತವಚನಗಳು ಉಪಯೋಗಕ್ಕೆ ಬರಲಿವೆ.

ಕರ್ಕಟಕ: ನಿಮ್ಮ ಮಾತಿನ ಚತುರತೆಯಿಂದ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಕ್ಕಳ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಸಂಪತ್ತು  ವೃದ್ಧಿಗೆ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ಹೊಸ ವಸ್ತು ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ಮಕ್ಕಳ ಪ್ರೀತಿ ಸಂಪಾದನೆ ಮಾಡಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗ.

ಕನ್ಯಾ: ಬಹಳ ದಿನಗಳ ನಂತರ ಆಪ್ತ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ನಿಮ್ಮ ಸಾಹಸ, ಬುದ್ಧಿವಂತಿಕೆಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರವುದು. ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿರುವ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ನಿರುದ್ಯೋಗಿಗಳಿಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಯಶಸ್ಸು ಸಿಗಲಿದೆ. ತಾಳ್ಮೆಯಿರಲಿ.

ಧನು: ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮಕರ: ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಏಳಿಗೆ ಕಾಣಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರದ ಮಿತ್ರರಿಂದ ಸಹಾಯವೊದಗಿಬರಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅನಿವಾರ್ಯ ಕಾರಣಗಳಿಗೆ ಅನ್ಯ ಊರಿಗೆ ಪ್ರಯಾಣ ಮಾಡುವ ಅನಿವಾರ್ಯತೆ ಎದುರಾಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಿಶೇಷ ವ್ಯಕ್ತಿಗಳ ಭೇಟಿ ಸಾಧ‍್ಯತೆ.

ಮೀನ: ಇಂದು ನೀವು ಮುಟ್ಟಿದ್ದೆಲ್ಲಾ ಚಿನ್ನ ಎನ್ನುವ ಸ್ಥಿತಿಯಾಗಿರಲಿದೆ. ಉದ್ಯೋಗ,ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ. ದೈಹಿಕವಾಗಿ ಶ್ರಮವಿದ್ದರೂ ಅದಕ್ಕೆ ಫಲ ಸಿಗುವುದರಿಂದ ನೆಮ್ಮದಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ