ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 18 ಆಗಸ್ಟ್ 2022 (07:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಪಲ್ಲಟವಾಗುವ ಸಾಧ‍್ಯತೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ. ಹಣಕಾಸಿನ ಸುಧಾರಣೆಗೆ ನಿಮ್ಮ ಕೈಲಾದ ಪ್ರಯತ್ನ ಮಾಡಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆಸ್ತಿ ಖರೀದಿ ವಿಚಾರದಲ್ಲಿ ಹಿರಿಯರ ಸಲಹೆ ಪಡೆದು ಮುಂದುವರಿಯಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸುವ ಯೋಗ. ಪ್ರೀತಿ ಪಾತ್ರರಿಂದ ಅಚ್ಚರಿಯ ವಾರ್ತೆ ಕೇಳಿಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ಕರ್ಕಟಕ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಒಳಗಾಗುವ ಪರಿಸ್ಥಿತಿ ಎದುರಾಗಲಿದೆ. ಯಂತ್ರೋಪಕರಣಗಳ ಜೊತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಭಿವೃದ್ಧಿ ಕಂಡುಬರಲಿದೆ. ಆದಾಯ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಸಹೋದ್ಯೋಗಿಗಳ ಅಸಹಕಾರ ಕಿರಿ ಕಿರಿ ತಂದೀತು. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಕಾರ್ಯಕ್ಷೇತ್ರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದ್ದು, ಯಶಸ್ಸು ಪಡೆಯಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನದ ದಿಕ್ಕು ಬದಲಾಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳನ್ನು ರಕ್ಷಿಸುವ ಹೊಣೆಗಾರಿಕೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ವೈಯಕ್ತಿಕ ಗುಟ್ಟುಗಳು ರಟ್ಟಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ಮಕರ: ಪಾಲು ಬಂಡವಾಳ ವ್ಯವಹಾರದಿಂದ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳ ಕಲಿಕೆಗೆ ಅವಕಾಶ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳು ಇತರರ ಗಮನ ಸೆಳೆಯಲಿವೆ. ನೆಮ್ಮದಿ ಕಂಡುಬರುವುದು.

ಕುಂಭ: ಅನಿವಾರ್ಯ ಕೆಲಸದ ನಿಮಿತ್ತ ಅನ್ಯವೂರಿಗೆ ಪ್ರಯಾಣ ಮಾಡುವ ಸಂದರ್ಭ ಎದುರಾದೀತು. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ.

ಮೀನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ನೆಂಟರಿಷ್ಟರ ಆಗಮನದಿಂದ ಸಂತೋಷವಿರಲಿದೆ. ಪೂರ್ವಾಪರ ಯೋಚಿಸದೇ ನಿರ್ಧಾರ ಕೈಗೊಳ್ಳಲು ಹೋಗಬೇಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ