ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 20 ಆಗಸ್ಟ್ 2022 (06:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಮನಸ್ಸಿನಲ್ಲಿರುವ ಅಸಮಾಧಾನವನ್ನು ಸಂಗಾತಿ ಮುಂದೆ ಹೊರಹಾಕಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ತಾಳ್ಮೆಯಿರಲಿ.

ವೃಷಭ: ಅನಿರೀಕ್ಷಿತವಾಗಿ ಧನಾದಾಯ ಬರಲಿದ್ದು, ನಿರೀಕ್ಷಿತ ಕೆಲಸಗಳನ್ನು ಪೂರ್ತಿಗೊಳಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ದೈಹಿಕವಾಗಿಯೂ, ಮಾನಸಿಕವಾಗಿಯೂ ಬಳಲಿದಂತೆ ಅನಿಸಲಿದೆ. ದಾಂಪತ್ಯದಲ್ಲಿ ಸಾಮರಸ್ಯ ಅಗತ್ಯ. ಕೌಟುಂಬಿಕವಾಗಿ ಹೊಸ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಇತರರ ಸಹಕಾರ, ಸಹಾಯ ಕಂಡುಬರಲಿದೆ. ಮಹಿಳೆಯರಿಗೆ ಕೌಟುಂಬಿಕ ವಿಚಾರದಲ್ಲಿ ಸಮಸ್ಯೆಗಳು ಉಂಟಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕನ್ಯಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಅವಕಾಶಗಳು ಕೂಡಿಬರಲಿವೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಮಹಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಕುಟುಂಬದವರ ಪ್ರೋತ್ಸಾಹದಿಂದ ಅಭಿವೃದ್ಧಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಚಿಂತೆ ಬೇಡ.

ವೃಶ್ಚಿಕ: ನಿರೀಕ್ಷೆಗೂ ಮೀರಿದ ಧನಾದಾಯವಿದ್ದರೂ ಅದಕ್ಕೆ ತಕ್ಕ ಖರ್ಚೂ ಇರಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಹೊಂದಾಣಿಕೆ ಸಮಸ್ಯೆಗಳು ಕಂಡುಬಂದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಧನು: ಮನಸ್ಸಿನಲ್ಲಿರುವ ವಿಚಾರವನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ನೋಡಿಕೊ‍ಳ್ಳಿ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ.

ಮಕರ: ಅತೀವ ಕೆಲಸದೊತ್ತಡದಿಂದ ದೇಹಾಯಾಸವಾದೀತು. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿಮ್ಮ ಉದ್ದೇಶಿತ ಕೆಲಸಗಳಿಗೆ ತೊಂದರೆಗಳು ಎದುರಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ವ್ಯವಹಾರದಲ್ಲಿ ಅಡೆತಡೆಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಬಂಧು ಮಿತ್ರರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ