ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 25 ಆಗಸ್ಟ್ 2022 (07:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಉಳಿತಾಯದ ಹಣವನ್ನು ಉಪಯುಕ್ತ ಕೆಲಸಕ್ಕೆ ಬಳಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಫಲ ಪ್ರದ ದಿನವಾಗಿರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಪರಿಶ್ರಮ ಪಡಬೇಕಾಗುತ್ತದೆ.

ವೃಷಭ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಬೇರೆಯವರಿಂದ ಮೆಚ್ಚುಗೆ ಸಿಗಲಿದೆ. ಇಷ್ಟವಸ್ತುಗಳ ಖರೀದಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವೃದ್ಧಿ ಕಂಡುಬರಲಿದೆ.

ಮಿಥುನ: ದಾಂಪತ್ಯದಲ್ಲಿ ತೃಪ್ತಿದಾಯಕ ವಾತಾವರಣವಿರಲಿದೆ. ನೆರೆಹೊರೆಯವರಿಗೆ ಕೈಲಾದ ಸಹಾಯ ಮಾಡಲಿದ್ದೀರಿ. ಹಿರಿಯರಿಗೆ ಸಾಮಾಜಿಕ ಕೆಲಸಗಳಿಂದ ನೆಮ್ಮದಿ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ಇತರರು ಅಸೂಯೆಪಡುವಂತೆ ಅಭಿವೃದ್ಧಿ ಕಂಡುಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ಸಿಂಹ: ವ್ಯವಹಾರದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳಿಂದ ಪೈಪೋಟಿ ಎದುರಾದೀತು. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆ ಎದುರಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಕಾರ್ಯಸಿದ್ಧಿಯಾಗಬೇಕಾದರೆ ಸತತ ಪ್ರಯತ್ನ ಅಗತ್ಯ. ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ವಾಹನ ಸಂಚಾರ ಮಾಡಬೇಕಾಗುತ್ತದೆ.

ತುಲಾ: ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಹೈರಾಣಾಗಲಿದ್ದೀರಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡುವಿರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ವೃಶ್ಚಿಕ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಉನ್ನತ ಸ್ಥಾನ ಮಾನದ ಗೌರವ ಸಿಗುವುದು.

ಧನು: ಕಾರ್ಯರಂಗದಲ್ಲಿ ಅನೇಕ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗುವುದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ನೂತನ ಮಿತ್ರರ ಸಮಾಗಮದಿಂದ ಸಂತೋಷ ವೃದ್ಧಿಯಾಗಲಿದೆ. ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊ‍ಳ್ಳಲಿದ್ದೀರಿ. ಬಚ್ಚಿಟ್ಟಿದ್ದ ವಿಚಾರಗಳು ಹೊರಗೆ ಬರಲಿವೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ್ಯತೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಸಾಲ ವಾಪಸಾತಿ ಚಿಂತೆ ಕಾಡೀತು.  ಬಂಧು ಮಿತ್ರರ ಸಹಕಾರ ಕಂಡುಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ