ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 18 ನವೆಂಬರ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಂಡುಬರಲಿದೆ. ಆದರೆ ಸಂಗಾತಿಯ ಹಠವಾದೀ ಮನೋಭಾವ ನಿಮ್ಮ ಅಸಹನೆ ಹೆಚ್ಚಿಸಲಿದೆ. ಹಿಂದೆ ಮಾಡಿದ್ದ ತೀರ್ಮಾನವನ್ನು ಗಟ್ಟಿ ಮಾಡಲಿದ್ದೀರಿ.

ವೃಷಭ: ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೇ ನಿರಾಸೆಯಾದೀತು. ಭೂಮ್ಯಾದಿ ವ್ಯವಹಾರಗಳನ್ನು ಮಾಡುವಾಗ ಹಿರಿಯರ ಸಲಹೆ ಪಡೆಯುವುದು ಉತ್ತಮ. ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ನೆಮ್ಮದಿ ಸಿಗುವುದು.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ಕರ್ಕಟಕ: ಗಣ್ಯ ವ್ಯಕ್ತಿಗಳಿಂದ ನಿಮ್ಮ ಕೆಲಸಕ್ಕೆ ಅನುಕೂಲವಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ದೊಡ್ಡದಾಗಲು ಬಿಡಬೇಡಿ. ತಾಳ್ಮೆಯಿರಲಿ.

ಸಿಂಹ: ವಿವೇಚನೆಯಿಲ್ಲದೇ ನಿರ್ಧಾರ ತೆಗೆದುಕೊಂಡರೆ ಮುಂದೆ ಪಶ್ಚಾತ್ತಾಪ ಪಡಬೇಕಾದೀತು. ಹಳೆಯ ಪ್ರೇಮಿಗಳ ನೆನಪು ಕಾಡಿಬಂದೀತು. ಕೆಲಸ ಕಾರ್ಯಗಳಲ್ಲಿ ನಿಮ್ಮ ಪ್ರಾಮಾಣಿಕತೆ ಮುಂದುವರಿಸಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಪಾಲುದಾರಿಕೆ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಕಂಡುಬರಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ದೈಹಿಕವಾಗಿ ಆರೋಗ್ಯ ಸುಧಾರಿಸಿದರೂ ಮಾನಸಿಕವಾಗಿ ಕೆಲವೊಂದು ಚಿಂತೆ ಕಾಡಲಿದೆ.

ತುಲಾ: ಮಹಿಳೆಯರಗೆ ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆ ಸಾಧ‍್ಯತೆ. ಮಾತೃ ಸಮಾನರಿಂದ ಸಹಾಯ ಒದಗಿಬರಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ ಕಂಡುಬರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಆದಾಯ ವೃದ್ಧಿಯಾಗಲಿದ್ದು, ಹೊಸ ಯೋಜನೆಗಳಿಗೆ ಬಂಡವಾಳ ಹೂಡಲಿದ್ದೀರಿ.  ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ತಾಳ್ಮೆ ಅಗತ್ಯ.

ಧನು: ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ಸತ್ಕರ್ಮಗಳಿಗಾಗಿ ಧನ ವ್ಯಯ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಮಕರ: ಪೂರ್ವಾಪರ ತಿಳಿದು ವ್ಯವಹಾರ ಮಾಡುವುದು ಉತ್ತಮ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸಾಂಸಾರಿಕವಾಗಿ ಸುಖ, ಶಾಂತಿ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಆರ್ಥಿಕವಾಗಿ ಧನಾಗಮನವಿದ್ದರೂ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ವಾಹನಾದಿ ಸೌಕರ್ಯ ಖರೀದಿ ವಿಚಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ