ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 20 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರ್ಕಾರೀ ನೌಕಕರಿಗೆ ಕೊನೆಯ ಗಳಿಗೆಯಲ್ಲಿ ಮುಂಬಡ್ತಿ ತಪ್ಪಿ ಹೋದೀತು. ಅಧ್ಯಯನ ಶೀಲರಿಗೆ ಉನ್ನತ ಅವಕಾಶಗಳು ಸಿಗಲಿವೆ. ಮನಸ್ಸಿನಲ್ಲಿರುವುದನ್ನು ಆಪ್ತರೊಂದಿಗೆ ಹೇಳಿಕೊಳ್ಳಲು ಹಿಂಜರಿಯಲಿದ್ದೀರಿ.

ವೃಷಭ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆಯಿದ್ದು, ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿಯಿರಲಿದೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರಿಂದ ಸಹಾಯ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದಾಂಪತ್ಯದಲ್ಲಿ ಸುಖಕ್ಕೆ ಕೊರತೆಯಾಗದು. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಂತೋಷವಿರಲಿದೆ. ಕಾರ್ಯರಂಗದಲ್ಲಿ ಕೊಂಚ ಅಡೆತಡೆಗಳು ಬಂದೀತು. ತಾಳ್ಮೆಯಿರಲಿ.

ಸಿಂಹ: ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಸಾಲಗಾರರಿಂದ ಕಿರಿ ಕಿರಿ ಉಂಟಾದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಹೊಸ ಸ್ನೇಹಿತರನ್ನು ಸಂಪಾದಿಸಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗಲಿದೆ. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಗಣನೀಯ ಪ್ರಗತಿ. ವಿವೇಚನೆಯಿಲ್ಲದೇ ನಿರ್ಧಾರ ತೆಗೆದುಕೊಳ್ಳಬೇಡಿ.

ತುಲಾ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ. ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗುತ್ತದೆ. ಉತ್ತಮ ಜನ ಸಂಪರ್ಕದಿಂದ ಕಾರ್ಯಗಳು ಸುಗಮವಾಗಿ ನೆರವೇರಲಿದೆ.

ವೃಶ್ಚಿಕ: ಸಂಗಾತಿಯೊಂದಿಗೆ ಇಷ್ಟು ದಿನ ಹೇಳಿಕೊಳ್ಳಲು ಹಿಂಜರಿಯುತ್ತಿದ್ದ ವಿಚಾರವನ್ನು ಹೊರ ಹಾಕುವ ಧೈರ್ಯ ಮಾಡಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಸ್ವಯಂ ವೃತ್ತಿಯವರಿಗೆ ಹಣಕಾಸಿನ ಅಡಚಣೆ ಕಂಡುಬಂದೀತು.

ಧನು: ನಿಮ್ಮ ಒಳ್ಳೆಯತನ ದುರುಪಯೋಗಪಡಿಸಿಕೊಳ್ಳುವವಿರುತ್ತಾರೆ. ಎಚ್ಚರಿಕೆಯಿರಲಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಅನಗತ್ಯ ಚಿಂತೆ ಬೇಡ.

ಮಕರ: ಪಾಲು ಬಂಡವಾಳ ಹೂಡಿಕೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾತಿನಲ್ಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ಕಷ್ಟಗಳು ಪರಿಹಾರವಾಗಲಿದೆ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ನಿಮ್ಮ ಭವಿಷ್ಯದ ಯೋಜನೆಗಳಿಗೆ ಅಡ್ಡಿ ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮೀನ: ಮನಸ್ಸಿನಲ್ಲಿ ಅದುಮಿಟ್ಟಿದ್ದ ಆಸೆಗಳನ್ನು ಹೊರಗೆಡವಲಿದ್ದೀರಿ. ಆತುರದ ನಿರ್ಧಾರಗಳಿಂದ ಅನಾಹುತಗಳಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಯತ್ನದಲ್ಲಿ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ