ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 21 ಜನವರಿ 2023 (08:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ ನಿಮ್ಮದಾಗಲಿದೆ. ಆದರೆ ಸಾಂಸಾರಿಕವಾಗಿ ಹೇಳಬೇಕಾಗಿರುವನ್ನು ಹೇಳಲಾಗದೇ ಒದ್ದಾಡಲಿದ್ದೀರಿ. ಸಂಗಾತಿಯೊಂದಿಗೆ ಸಹನೆಯಿಂದ ವರ್ತಿಸಿ.

ವೃಷಭ: ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗುವ ಸಾಧ‍್ಯತೆ. ಹೊಸ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಸಾಮಾನ್ಯ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ತಾಳ್ಮೆ ಅಗತ್ಯ.

ಮಿಥುನ: ಕಾರ್ಯರಂಗದಲ್ಲಿ ಸ್ವ ಪ್ರಯತ್ನದ ಕೊರತೆ ಕಂಡುಬರಲಿದೆ. ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳು ಬಂದೀತು. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಡನೆ ಚರ್ಚಿಸುವುದು ಸೂಕ್ತ. ಚಿಂತೆ ಬೇಡ.

ಕರ್ಕಟಕ: ಬಹಳ ದಿನಗಳಿಂದ ಕಷ್ಟವೆಂದು ಕುಳಿತಿದ್ದ ಕೆಲಸ ಇಂದು ಆತ್ಮೀಯರ ಸಹಾಯದಿಂದ ಸುಗಮವಾಗಿ ನೆರವೇರಲಿದೆ. ಬೆಟ್ಟದಂತೆ ಬಂದ ಕಷ್ಟ ಮಂಜಿನಂತೆ ಕರಗಿ ಹೋಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಸದುದ್ದೇಶಕ್ಕಾಗಿ ನೀವು ಮಾಡುವ ಕೆಲಸಗಳು ತಿರುಗುಬಾಣವಾಗುವ ಸಾಧ್ಯತೆ. ಕಾರ್ಯಸಾಧನೆಗೆ ಕಠಿಣ ಪರಿಶ್ರಮ ಅಗತ್ಯ. ವಾಹನ, ಭೂಮಿ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ತಾಳ್ಮೆಯಿರಲಿ.

ಕನ್ಯಾ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಬಂಧು ಮಿತ್ರರಿಂದ ಸಹಕಾರ ಕಂಡುಬಂದೀತು. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಅನಿರೀಕ್ಷಿತವಾಗಿ ಭೇಟಿ ಮಾಡುವ ವ್ಯಕ್ತಿಗಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಪ್ರಗತಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಸಾಧ‍್ಯತೆ.

ಧನು: ಸಾಂಸಾರಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಇತರರಿಗೆ ಕಿರಿ ಕಿರಿ ಉಂಟು ಮಾಡೀತು. ಯೋಚಿಸಿ ನಿರ್ಧಾರಕ್ಕೆ ಬರುವುದು ಉತ್ತಮ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ.

ಮಕರ: ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡವರಿಗೆ ಲಾಭವಾಗಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮಲ್ಲಿರುವ ಕ್ರಿಯಾತ್ಮಕತೆಯನ್ನು ಹೊರತರಲಿದ್ದೀರಿ. ಚಿಂತೆ ಬೇಡ.

ಕುಂಭ: ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರನ್ನು ಭೇಟಿಯಾಗುವ ನಿಮ್ಮ ಕನಸು ನೆರವೇರಲಿದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆಸ್ತಿ ವಿಚಾರದಲ್ಲಿ ಪರಿಶ್ರಮವಿದ್ದರೂ ಮುನ್ನಡೆ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಪಾಲುದಾರಿಕೆ ವ್ಯವಹಾರದಿಂದ ನಿರೀಕ್ಷಿತ ಧನಾಗಮನವಾಗಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ