ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 27 ಮೇ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ಹಿಂದಿನ ತಪ್ಪುಗಳಿಗೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ. ನಿಮ್ಮ ಮಾತುಗಳಿಂದ ಸಂಗಾತಿಯ ಮನಸ್ಸಿಗೆ ನೋವಾದೀತು. ವಿದ್ಯಾರ್ಥಿಗಳಿಗೆ ತಕ್ಕಮಟ್ಟಿನ ಯಶಸ್ಸು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಮೇಲಧಿಕಾರಿಗಳ ಆದೇಶ ಪಾಲಿಸಲೇಬೇಕಾದ ಪರಿಸ್ಥಿತಿಯಿರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಳೆದು ಹೋದ ವಸ್ತುಗಳು ತಾನಾಗಿಯೇ ಕೈ ಸೇರಲಿವೆ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗಲಿದೆ.

ಕರ್ಕಟಕ: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಿಂಹ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ನಿಮ್ಮಿಂದ ಉಪಕಾರ ಪಡೆದವರಿಂದ ಪ್ರತ್ಯುಪಕಾರ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಮನೆಯವರ ಅಭಿಪ್ರಾಯ ಪಡೆಯದೇ ಯಾವುದೇ ಕೆಲಸಕ್ಕೆ ಕೈಹಾಕಲು ಹೋಗಬೇಡಿ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ನಿರುದ್ಯೋಗಿಗಳು ಹೊಸ ಸಾಹಸಕ್ಕೆ ಕೈ ಹಾಕಬೇಕಾಗುತ್ತದೆ.

ತುಲಾ: ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ವಿದೇಶೀ ಮೂಲಗಳಿಂದ ಧನಾಗಮನವಾಗಲಿದೆ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ವೃಶ್ಚಿಕ: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲು ಹಿರಿಯರ ಸಲಹೆ ಪಡೆಯುವುದು ಉತ್ತಮ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ನಿಮ್ಮ ತೀರ್ಮಾಗಳಿಗೆ ಬದ್ಧರಾಗಬೇಕಾಗುತ್ತದೆ.

ಧನು: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾದೀತು. ಯಶಸ್ಸಿಗೆ ಪರಿಶ್ರಮ ಇನ್ನೂ ಹೆಚ್ಚು ಪಡಬೇಕಾದ ಅನಿವಾರ್ಯತೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರುವುದು.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಾಂಪತ್ಯದಲ್ಲಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ಆಸ್ತಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ