ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 1 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತವಾಗಿ ಧನ ಸಂಪತ್ತು  ವೃದ್ಧಿಯಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಹೊಂದಾಣಿಕೆ ಸಮಸ್ಯೆ ಬಂದೀತು. ತಾಳ್ಮೆಯಿರಲಿ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ಸರಿಯಾಗಿ ಪರರಿಂದ ಸಹಾಯವೊದಗಿಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವಾಕ್ಚತುರತೆಯಿಂದ ಇತರರ ಮನ ಗೆಲ್ಲಲಿದ್ದೀರಿ.

ಮಿಥುನ: ಗುರುಹಿರಿಯರಿಂದ ಸಂತೋಷವೊದಗಿಬರಲಿದೆ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆ ಮಾಡಲಿದ್ದೀರಿ. ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.

ಕರ್ಕಟಕ: ನಿರುದ್ಯೋಗಿಗಳು ಅವಕಾಶಗಳಿಗಾಗಿ ಸ್ವಯಂ ವೃತ್ತಿಯ ಬಗ್ಗೆ ಯೋಚನೆ ಮಾಡಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಆಸ್ತಿ ವಿಚಾರದಲ್ಲಿ ಪ್ರಯಾಸಕರ ಗೆಲುವು. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಕೆಲಸ ಕಾರ್ಯಗಳಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಅನಿರೀಕ್ಷಿತವಾಗಿ ಹಣಕಾಸಿನ ಹರಿವು ಇರಲಿದೆ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಪ್ರೀತಿ ವಿಚಾರವನ್ನು ಮುಚ್ಚಿಟ್ಟುಕೊಂಡಿದ್ದರೆ ಇಂದು ಬಯಲಾಗುವುದು.

ಕನ್ಯಾ: ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಸಾಧ‍್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಕ್ಕಳ ನಿಮಿತ್ತ ಶ್ರಮವಹಿಸಬೇಕಾದೀತು. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಪ್ರಯಾಣದಲ್ಲಿ ಅಡೆತಡೆಗಳು ಬಂದೀತು. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಯಾಗುವ ಸಾಧ್ಯತೆ.

ವೃಶ್ಚಿಕ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಧನು: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ಸಿಗಲಿದೆ. ಮೇಲಧಿಕಾರಿಗಳಿಂದ ಹೆಚ್ಚಿದ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸನ್ಮಿತ್ರರ ಸಹಕಾರ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಆತಂಕ ಬೇಡ.

ಕುಂಭ: ಹಣಕಾಸಿನ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪದಿಂದ ಕಿರಿ ಕಿರಿಯಾಗುವ ಸಂದರ್ಭ ಎದುರಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ.

ಮೀನ: ಅಧ‍್ಯಯನ ಪ್ರವೃತ್ತರಿಗೆ ಉನ್ನತ ಅವಕಾಶಗಳು ಸಿಗಲಿದೆ. ಮಹಿಳೆಯರಿಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಬೇಕಾದೀತು. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಿಸಬೇಕಾದೀತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ