ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 18 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ತಾಳ್ಮೆಯಿರಲಿ.

ವೃಷಭ: ನಿರುದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ಕಾರ್ಯರಂಗದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಗಿಳ ಸಹಕಾರ ಪಡೆಯಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಮಿಥುನ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರದ ಭಾಗ್ಯ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ಕನ್ಯಾ: ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಬಹುದಿನಗಳಿಂದ ಬರಬೇಕಾಗಿದ್ದ ಬಾಕಿ ಹಣ ಸಂದಾಯವಾಗಲಿದೆ.

ತುಲಾ: ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ತಾಳ್ಮೆಯಿರಲಿ.

ವೃಶ್ಚಿಕ: ಸಂತಾನಹೀನ ದಂಪತಿ ದೇವರ ಮೊರೆ ಹೋಗಲಿದ್ದಾರೆ. ಪಾಲುದಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಲಾಭ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಧನು: ನಿಮ್ಮ ಮೆಚ್ಚಿನ ವ್ಯಕ್ತಿಗಳಿಂದ ಅನಿರೀಕ್ಷಿತ ಉಡುಗೊರೆ ಪಡೆಯುವ ಯೋಗ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆ ಎದುರಿಸುವ ಆತಂಕ ಕಾಡೀತು.

ಮಕರ: ನಿರೀಕ್ಷೆಗೂ ಮೀರಿದ ಸ್ಥಾನ ಮಾನ ನಿಮ್ಮದಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಪೈಪೋಟಿ ಎದುರಾದೀತು. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಹೊಸ ಸವಾಲು ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ.

ಮೀನ: ದೈಹಿಕವಾಗಿ ಆರೋಗ್ಯ ಉತ್ತಮವಾಗಿದ್ದರೂ ಮಾನಸಿಕವಾಗಿ ಒತ್ತಡಗಳು ಎದುರಾದೀತು. ದೇವತಾ ಕಾರ್ಯದಿಂದ ಮನಃತೃಪ್ತಿ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ