ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 27 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಧನ ಸಂಪತ್ತು ವೃದ್ಧಿಸುವ ಅವಕಾಶಗಳು ಸಿಗಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ಅಂದುಕೊಂಡ ಕೆಲಸಗಳನ್ನು ನಿಗದಿತ ಸಮಯಕ್ಕೆ ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಆಧ್ಯಾತ್ಮಿಕ ಚಿಂತನೆಯಲ್ಲಿ ತೊಡಗಿಸಿಕೊಂಡವರಿಗೆ ನೆಮ್ಮದಿ. ಹೊಸ ಕೆಲಸಕ್ಕೆ ಕೈ ಹಾಕಲು ಸಕಾಲ.

ಕರ್ಕಟಕ: ಹಿರಿಯರಿಗೆ ದೇವಾಲಯ ಸಂದರ್ಶನ ಯೋಗ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಗಾಬರಿಪಡಬೇಕಾಗಿಲ್ಲ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರುವುದು.

ಸಿಂಹ: ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರ ಭಾಗ್ಯ. ಯೋಗ್ಯತೆಗೆ ಅನುಸಾರವಾಗಿ ಉದ್ಯೋಗಾವಕಾಶಗಳು ಬರಲಿವೆ. ನೆರೆಹೊರೆಯವರಿಂದ ಸಹಾಯ ಸಿಗಲಿದೆ. ಹಣಕಾಸಿನ ಖರ್ಚು ವೆಚ್ಚದ ಮೇಲೆ ಹಿಡಿತವಿರಲಿ.

ಕನ್ಯಾ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ತುಲಾ: ಬೇರೆಯವರು ನಿಮ್ಮ ಕೆಲಸಗಳಲ್ಲಿ ಮೂಗು ತೂರಿಸುವುದರಿಂದ ಕಿರಿ ಕಿರಿ ಉಂಟಾದೀತು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆಹಾರೋದ್ಯಮಿಗಳಿಗೆ ಪೈಪೋಟಿಗಳು ಎದುರಾಗಲಿವೆ. ತಾಳ್ಮೆಯಿರಲಿ.

ವೃಶ್ಚಿಕ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗುವುದು.

ಧನು: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮನಸ್ಸಿನಲ್ಲಿರುವ ಆಲೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ.

ಮಕರ: ವಾಸ್ತವ ಸ್ಥಿತಿ ಅರಿತು ಮಾತನಾಡುವುದು ಉತ್ತಮ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಆತ್ಮೀಯರ ಸಲಹೆ ಪಡೆಯಿರಿ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದೀತು.

ಕುಂಭ: ನಿಮ್ಮ ಆತ್ಮವಿಶ್ವಾಸವೇ ನಿಮಗೆ ಆಸ್ತಿಯಾಗಲಿದೆ. ಮಕ್ಕಳ ವಿಚಾರದಲ್ಲಿ ಕೆಲವೊಂದು ಕೆಲಸ ಮಾಡಿ ಮುಗಿಸಿದ ತೃಪ್ತಿ ಸಿಗುವುದು. ದೂರ ಸಂಚಾರದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸುವುದಕ್ಕೆ ಕೆಲವು ದಿನ ಕಾಯುವುದು ಉತ್ತಮ. ವ್ಯವಹಾರದಲ್ಲಿ ಹಿತಶತ್ರುಗಳಿಂದ ತೊಂದರೆಗಳಾಗುವ ಸಾಧ‍್ಯತೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ