ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಶುಕ್ರವಾರ, 3 ಮೇ 2019 (06:00 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಮಹಿಳೆಯರು ಮಾನಸಿಕವಾಗಿ ಉದ್ವೇಗದಲ್ಲಿರುತ್ತಾರೆ. ಬೇಸರ ಕಾಡಬಹುದು. ಹಿರಿಯರೊಂದಿಗೆ ಮನಸ್ತಾಪವಾಗಬಹುದು. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚುವುದು.

ವೃಷಭ: ಸಾಂಸಾರಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಲವು ಅಡ್ಡಿ ಆತಂಕಗಳು ಎದುರಾಗಬಹುದು. ವಿದ್ಯಾರ್ಥಿಗಳಿಗೆ ಸತತ ಪ್ರಯತ್ನ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಆರ್ಥಿಕ ಪರಿಸ್ಥಿತಿ ಸುಧಾರಿಸುವುದು. ಉದ್ದೇಶಿತ ಯೋಜನೆಗಳಿಗೆ ಚಾಲನೆ ನೀಡುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅಡೆತಡೆಗಳು ಎದುರಾಗಬಹುದು. ವ್ಯಾಪಾರಿಗಳಿಗೆ ಸ್ಪರ್ಧೆ ಎದುರಾಗಬಹುದು.

ಕರ್ಕಟಕ: ದೈವಾನುಕೂಲದಿಂದ ಸಕಲ ಅಭಿವೃದ್ಧಿ ಕಾಣುವಿರಿ. ಹಾಗಿದ್ದರೂ ಉದಾಸೀನ ಪ್ರವೃತ್ತಿ ತೋರಿದರೆ ಯಶಸ್ಸು ಸಿಗದು. ಸಹೋದರಿಯರ ಮದುವೆ ಪ್ರಯತ್ನ ನಡೆಸುವಿರಿ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚುವುದು.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲು ಪ್ರಯತ್ನ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಬರಬಹುದು. ವ್ಯಾಪಾರ ವಹಿವಾಟುಗಳಿಗೆ ಕೈ ಹಾಕುವಾಗ ಎಚ್ಚರಿಕೆ ಅಗತ್ಯ.

ಕನ್ಯಾ: ವಾಹನ, ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾದೀತು. ಸಂಗಾತಿಯ ಇಷ್ಟ ಕಷ್ಟಗಳಿಗೆ ಕಿವಿಗೊಡಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಬಹುದು. ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಂಭವವಿದೆ.

ತುಲಾ: ಮನೆಯ ಹಿರಿಯರ ಆರೋಗ್ಯ ಕೈ ಕೊಟ್ಟು ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಹುದು. ಹೊಸ ವಾಹನ ಖರೀದಿಯಲ್ಲಿ ನಷ್ಟ ಅನುಭವಿಸುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು.

ವೃಶ್ಚಿಕ: ಅನಿರೀಕ್ಷಿತವಾಗಿ ಶುಭ ವಾರ್ತೆಗಳನ್ನು ಕೇಳುವಿರಿ. ಸಂಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಕಾರ ಸಿಗಲಿದೆ. ಉದ್ದೇಶಿತ ಕಾರ್ಯಗಳು ವಿಳಂಬವಾದರೂ ದಡ ಮುಟ್ಟುವುದು. ಮಾನಸಿಕ ಉದ್ವೇಗಗಳಿಗೆ ಒಳಗಾಗದಂತೆ ಮನಸ್ಸು ಹಿಡಿತದಲ್ಲಿಟ್ಟುಕೊಳ್ಳಿ.

ಧನು: ಸಹೋದರರಿಂದ ಕಿರಿ ಕಿರಿ ಉಂಟಾಗಬಹುದು. ಆಸ್ತಿ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಒಳ್ಳೆಯದು. ಸಾಮಾಜಿಕವಾಗಿ ನಿಮ್ಮ ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ. ಹಿರಿಯರ ಬಗ್ಗೆ ಕಾಳಜಿ ವಹಿಸಿ.

ಮಕರ: ನಿರುದ್ಯೋಗಿಗಳು ಕೊಂಚ ನಿರಾಶೆ ಅನುಭವಿಸುವರು. ಪ್ರೇಮಿಗಳಿಗೆ ಶುಭ ದಿನ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಆದರೆ ಕೌಟುಂಬಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಹಿರಿಯರ ಬೇಸರಕ್ಕೆ ಕಾರಣವಾಗಬಹುದು.

ಕುಂಭ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ಹೆಚ್ಚುವುದು. ಲೆಕ್ಕ ಪತ್ರಗಳನ್ನು ಸರಿಯಾಗಿಟ್ಟುಕೊಳ್ಳದಿದ್ದರೆ ಮುಂದೆ ಅಪಾಯ ತಪ್ಪದು. ಕನಸು ನನಸು ಮಾಡಿಕೊಳ್ಳಲು ಸತತ ಪ್ರಯತ್ನ ಅಗತ್ಯ.

ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಕಂಡುಬರಬಹುದು. ಆದಾಯಕ್ಕೆ ಕೊರತೆಯಿರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ