ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಗುರುವಾರ, 12 ಸೆಪ್ಟಂಬರ್ 2019 (08:37 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಮನೋಕಾಮನೆಗಳು ಪೂರೈಸದೇ ಮನಸ್ಸಿಗೆ ಬೇಸರವಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ಸಂಗಾತಿಯ ಅಸಹಕಾರ ಅಸಮಾಧಾನ ಉಂಟುಮಾಡಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಷಭ: ವ್ಯಾಪಾರ, ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಆದರೆ ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿರಲಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ಆದರೆ ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗುವುದು.

ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪಿದ್ದಲ್ಲ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ತಾಳ್ಮೆ ಅಗತ್ಯ.

ಕರ್ಕಟಕ: ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ಸಹೋದರರ ವಿವಾಹ ಪ್ರಯತ್ನಕ್ಕೆ ಓಡಾಟ ನಡೆಸುವಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಎಚ್ಚರವಾಗಿರಿ.

ಸಿಂಹ: ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಸುಮಧುರ ಕ್ಷಣ ಕಳೆಯುವಿರಿ. ಮಕ್ಕಳ ಭವಿಷ್ಯಕ್ಕೆ ಹೊಸ ಯೋಜನೆ ರೂಪಿಸುವಿರಿ. ಸಾಧು ಸಜ್ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು.

ಕನ್ಯಾ: ಆರ್ಥಿಕವಾಗಿ ಆದಾಯ ಹೆಚ್ಚಿಸಲು ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸುವಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸಿ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ತಾಳ್ಮೆ ಅಗತ್ಯ.

ತುಲಾ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸವನ್ನು ಪೂರ್ತಿ ಮಾಡುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನೀವು ಮಾಡುವ ಕೆಲಸ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಹೊಸ ಮಿತ್ರರ ಭೇಟಿಯಿಂದ ಹೊಸ ವಿಚಾರಗಳು ಹೊಳೆಯುವುದು. ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಕಾಳಜಿ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಧನು: ಕೌಟುಂಬಿಕವಾಗಿ ಹಳೆಯ ಸಂಬಂಧಗಳು ಮತ್ತೆ ಬೆಸೆಯಲಿವೆ. ಹಿರಿಯರ ಮಾತಿಗೆ ಬೆಲೆ ಕೊಡಬೇಕಾಗುತ್ತದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿ ಮನಸ್ತಾಪ ಮಾಡಿಕೊಳ್ಳಬೇಡಿ. ತಾಳ್ಮೆ ಅಗತ್ಯ.

ಮಕರ: ಪ್ರೀತಿ ಪಾತ್ರರ ಕಷ್ಟಗಳಿಗೆ ಹೆಗಲುಕೊಡುವಿರಿ. ಹೊಸ ಕೆಲಸಗಳಿಗೆ ಕೈ ಹಾಕಲು ಸುದಿನ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಸಂಗಾತಿಯ ಆರೋಗ್ಯದ ಕಡೆಗೆ ಕಾಳಜಿವಹಿಸಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಕುಂಭ: ಪ್ರೇಮಿಗಳ ಗುಟ್ಟು ಮನೆಯವರೆದುರು ಬಹಿರಂಗವಾಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಧನವ್ಯಯ ಮಾಡುವಿರಿ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗುವುದು. ಹೊಸ ಕೆಲಸಗಳಿಗೆ ಕೈ ಹಾಕುವಿರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ