ರಾಜನಾಥ್ ಸಿಂಗ್ ಭೇಟಿಯಾದ ಕರಣ್ ಜೋಹರ್

ಗುರುವಾರ, 20 ಅಕ್ಟೋಬರ್ 2016 (18:48 IST)
'ಏ ದಿಲ್ ಹೈ ಮುಷ್ಕಿಲ್' ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಕರಣ್ ಜೋಹರ್ ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 
 
ಕರಣ್ ಜೋಹರ್, ನಿರ್ಮಾಪಕ ಮಹೇಶ್ ಮತ್ತು ಇತರ ಹಲವು ನಿರ್ಮಾಪಕರು ಇಂದು ಗೃಹ ಮಂತ್ರಿಯನ್ನು ಭೇಟಿ ಮಾಡಿದರು. ಯಾವುದೇ ಹಿಂಸಾಚಾರವಿಲ್ಲದೇ ಸಿನಿಮಾ ಬಿಡುಗಡೆಯಾಗಲಿದೆ. ನಾನು ನಿಮ್ಮೊಂದಿಗಿದ್ದೇನೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸೂಕ್ತ ಭದ್ರತೆ ಒದಗಿಸುತ್ತೇನೆ ಎಂದು ಸಿಂಗ್ ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 
 
ಉರಿ ದಾಳಿ ಬಳಿಕ ಬಾಲಿವುಡ್ ಚಿತ್ರೋದ್ಯಮದಿಂದ ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಜತೆಗೆ ಅನೇಕ ರಾಜಕೀಯ ಪಕ್ಷಗಳು, ಹಲವು ಸಂಘ ಸಂಸ್ಥೆಗಳು ಸಹ ಪಾಕ್ ಕಲಾವಿದರು ಅಭಿನಯಿಸಿರುವ ಚಿತ್ರಗಳ ಬಿಡುಗಡೆಗೆ ಬಿಡುವುದಿಲ್ಲವೆಂದು ಎಚ್ಚರಿಸಿದ್ದವು. ಈ ಹಿನ್ನೆಲೆಯಲ್ಲಿ ಕರಣ್ ಜೋಹರ್ ಅವರ ನಿರ್ದೇಶನದ ಏ ದಿಲ್ ಹೈ ಮುಷ್ಕಿಲ್ ಚಿತ್ರ ಬಿಡುಗಡೆಗೆ ತೊಡಕಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ