ಮೊನ್ನೆ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಅನುರಾಗ್ ಕಶ್ಯಪ್ ಅವರ ಉಡ್ತಾ ಪಂಜಾಬ್ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಪ್ರಜಾಪ್ರಭುತ್ವದಲ್ಲಿ ಕ್ರಿಯೆಟಿವಿಟಿ ಎಂದಿಗೂ ನಿಲ್ಲವುದಿಲ್ಲ ಎಂದು ತಿಳಿಸಿದ್ದರು. 'ನಮ್ಮ ಪೂರ್ವಜರ ಸುದೀರ್ಘ ಹೋರಾಟದ ಬಳಿಕ ನಮಗೆ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಲಭಿಸಿದೆ'. 'ಕ್ರಿಯೆಟಿವಿಟಿಯನ್ನು ಪ್ರಜಾಪ್ರಭುತ್ವದಲ್ಲಿ ನಿಲ್ಲಿಸಲು ಸಾಧ್ಯವಿಲ್ಲ. 'ಜೈ ಗಂಗಾಜಲ' ಚಿತ್ರಕ್ಕೂ ಆಕ್ಷೇಪಣೆ ಕೇಳಿ ಬಂದಿದ್ದವು ಎಂದು ಪ್ರಿಯಾಂಕಾ ಹೇಳಿದ್ದರು.