ಕಾಸ್ಟಿಂಗ್ ಕೌಚ್‌ ಬಗ್ಗೆ ಚಿತ್ರರಂಗಕ್ಕೆ ಬರುವ ಹೊಸಬರಿಗೆ ಆಲಿಯಾ ಭಟ್ ಸಲಹೆ ಏನು ಗೊತ್ತಾ?

ಮಂಗಳವಾರ, 22 ಮೇ 2018 (08:38 IST)
ಮುಂಬೈ : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ಮೇಲೆ ಈ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದು, ಇದೀಗ ಈ ವಿಚಾರವಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.


ನಟಿ ಆಲಿಯಾ ಭಟ್ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ,’ಇದುವರೆಗೂ ಅಂತಹ ಪರಿಸ್ಥಿತಿ ನಾನು ಎದುರಿಸಿಲ್ಲ. ಆದರೆ, ಚಿತ್ರರಂಗದಲ್ಲಿ ಕೆಲಸ ಮಾಡುವುದು ಎಲ್ಲರಿಗೂ ಸುಲಭವಲ್ಲ. ಅವಕಾಶಕ್ಕಾಗಿ ಕಷ್ಟಪಡುತ್ತಿರುವ ವೇಳೆ ಕೆಲವರು ಅದನ್ನು ದುರಪಯೋಗ ಪಡಿಸಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಹಾಗೇ ‘ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಬನ್ನಿ. ಒಂದು ವೇಳೆ ನಿಮಗೆ ಕಾಸ್ಟಿಂಗ್ ಕೌಚ್‌ ನಂತಹ ಪರಿಸ್ಥಿತಿ ಎದುರಾದ್ರೆ ಮೊದಲು ನಿಮ್ಮ ಮನೆಯವರಿಗೆ ಹೇಳಿ. ಬಳಿಕ ಪೊಲೀಸರಿಗೆ ದೂರು ನೀಡಿ’ ಎಂದು ಚಿತ್ರರಂಗಕ್ಕೆ ಬರುವ ಹೊಸಬರಿಗೆ ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ