ಕೇರಳ ಪ್ರವಾಹ ಸಂತ್ರಸ್ತರಿಗೆ ಬಿಗ್ ಬಿ ಅಮಿತಾಬ್ ಬಚ್ಚನ್ ನೀಡಿದ್ದೇನು ಗೊತ್ತಾ?

ಶುಕ್ರವಾರ, 24 ಆಗಸ್ಟ್ 2018 (10:02 IST)
ಮುಂಬೈ : ಕೇರಳ ಪ್ರವಾಹ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನೇಕರು ನೆರವು ನೀಡುತ್ತಿದ್ದು, ಈ ಕೆಲಸಕ್ಕೆ ಇದೀಗ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕೈ ಜೋಡಿಸಿದ್ದಾರೆ.


ಇತ್ತೀಚೆಗಷ್ಟೇ ಕೇರಳದ ಸಂತ್ರಸ್ತರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವುದರ ಮೂಲಕ ಟ್ರೋಲ್ ಗೆ ಗುರಿಯಾದ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಕೇರಳ ಪ್ರವಾಹ ಸಂತ್ರಸ್ತರಿಗೆ ಒಟ್ಟು 51 ಲಕ್ಷ ನೆರವು ನೀಡಿದ್ದಾರೆ.


ಅಷ್ಟೇ ಅಲ್ಲದೇ ಹೆಚ್ಚಿನ ಬಟ್ಟೆಗಳನ್ನು ಕೂಡ ಪ್ರವಾಹ ಸಂತ್ರಸ್ಥರಿಗಾಗಿ ಅಮಿತಾಬ್ ಬಚ್ಚನ್ ಅವರು ನೀಡಿದ್ದಾರೆ. ಒಟ್ಟು 80 ಜಾಕೆಟ್ ಗಳು, 25 ಪ್ಯಾಂಟ್ ಗಳು, 20 ಶರ್ಟ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ