ಮಂಗಳೂರಿನ ಚಿತ್ರಾಲಿ, ಗದಗಿನ ಪುಟ್ಟರಾಜು ವಿಜೇತರಾಗಿ ಹೊರಹೊಮ್ಮಿದ್ದಾರೆ. ಕಡೆಯ ಸುತ್ತಿನಲ್ಲಿ ಪುಟ್ಟರಾಜು ಹಾಗೂ ಚಿತ್ರಾಲಿಯನ್ನು ವಿಜೇತರೆಂದು ಘೋಷಿಸಲಾಯ್ತು. ಮಹೇಂದ್ರ ಮೊದಲ ರನ್ನರ್ ಅಪ್ ಆಗಿದ್ದರೆ, ಅಮೋಘಾ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಅಂತಿಮ ಸುತ್ತಿಗೆ ಅಚಿಂತ್ಯಾ, ತುಷಾರ್, ಪುಟ್ಟರಾಜು ಹಾಗೂ ಚಿತ್ರಾಲಿ, ಮಹೇಂದ್ರ, ರೇವತಿ, ತೇಜಸ್ವಿನಿ ಭಾಗಿಯಾಗಿದ್ದರು. ಮಾಸ್ಟರ್ ಆನಂದ ಕಾರ್ಯಕ್ರಮದ ನಿರೂಪಣೆಯ ಹೊಣೆ ಹೊತ್ತಿದ್ದರು. ತೀರ್ಪುಗಾರರಾಗಿ ಕಿರುತೆರೆ ನಿರ್ದೇಶಕ ಟಿಎನ್ ಸೀತಾರಾಮ್, ಹಿರಿಯ ಕಲಾವಿದ ಲಕ್ಷ್ಮೀ ಹಾಗೂ ನಟ ವಿಜಯ್ ರಾಘವೇಂದ್ರ ಭಾಗಿಯಾಗಿದ್ದರು.