ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ತಂಡದವರಿಗೆ ಹೀಯಾಳಿಸಿದ ಕುವೈಟ್ ವಿಮಾನ ನಿಲ್ದಾಣದ ಅಧಿಕಾರಿಗಳು

ಮಂಗಳವಾರ, 8 ಮೇ 2018 (07:11 IST)
ನವದಿಲ್ಲಿ : ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ಅವರ ತಂಡದವರಿಗೆ ಕುವೈಟ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೀಯಾಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಗಾಯಕ ಅದ್ನಾನ್ ಸಾಮಿ ಅವರು,’ ದೇಶಕ್ಕೆ ಪ್ರೀತಿ ಹಾಗೂ ಸಹೋದರ ಭಾವನೆಯಿಂದ ಬಂದಿದ್ದೆವು. ಆದರೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತುಂಬಾ ಕೆಟ್ಟದಾಗಿ ನಡೆಸಿಕೊಂಡರು. ಭಾರತೀಯ ನಾಯಿಗಳೆಂದು ಹೀಯಾಳಿಸಿದರು. ಕುವೈಟ್ ನವರಿಗೆ ಹೀಗೆ ವರ್ತಿಸಲು ಎಷ್ಟು ಧೈರ್ಯ ಎಂದು ಬರೆದು ಅದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಸುಶ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು,’ ಸುಷ್ಮಾ ಸ್ವರಾಜ್ ಅವರು ಈ ವಿಚಾರವಾಗಿ ಗಮನ ಹರಿಸಿದ್ದಾರೆ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ