'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್‌ಗೆ ಬರ್ತಾರಾ ಪವನ್ ಕಲ್ಯಾಣ?

ಶನಿವಾರ, 3 ಸೆಪ್ಟಂಬರ್ 2016 (14:21 IST)
ನಟ ನಿಖಿಲ್ ಗೌಡ ಅಭಿನಯದ 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮೊನ್ನೆ ಪವನ್ ಕಲ್ಯಾಣ ನಿವಾಸಕ್ಕೆ ಭೇಟಿ ನೀಡಿದ್ರು. ಯಾವುದೇ ರಾಜಕೀಯ ಉದ್ದೇಶಕ್ಕಾಗಿ ನಾನು ಭೇಟಿಯಾಗಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದರು.


ಹೆಚ್‌ಡಿ ಕುಮಾರಸ್ವಾಮಿ ನಿರ್ಮಾಣ ಮಾಡುತ್ತಿರುವ 'ಜಾಗ್ವಾರ್' ಚಿತ್ರದ ಬಗ್ಗೆ ಪವನ್ ಕಲ್ಯಾಣ ಜತೆಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದರು. 
 
ಇಂದು 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಸಮಾರಂಭ ನಡೆಯುತ್ತಿದೆ. ಈ ಸಮಾರಂಭಕ್ಕೆ ತೆಲಗು ನಟ ಪವನ್ ಕಲ್ಯಾಣ ಬರುತ್ತಾರೆ ಎಂದು ಹೇಳಲಾಗುತ್ತಿದೆ.

ಇದಕ್ಕಾಗಿ ಪವನ್ ಕಲ್ಯಾಣಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮುತಾಂದ ಗಣ್ಯರು ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಬರುತ್ತಾರೆ ಎನ್ನಲಾಗುತ್ತಿದೆ. 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಗೆ ಈ ಮೂವರು ಗಣ್ಯರು ಆಗಮಿಸುತ್ತಿರುವುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ವೆಬ್ದುನಿಯಾವನ್ನು ಓದಿ