ಯುಪಿ ಸಿಎಂ ಅಖಿಲೇಶ್ ಯಾದವ್‌ಗೆ ಧನ್ಯವಾದ ತಿಳಿಸಿದ ಸಲ್ಮಾನ್

ಶನಿವಾರ, 30 ಏಪ್ರಿಲ್ 2016 (17:40 IST)
ಬಾಲಿವುಡ್ ನಟ ಸಲ್ಮಾನ್ ಖಾನ್ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ಧನ್ಯವಾದ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಶೂಟಿಂಗ್ ವೇಳೆ ಸಾಕಷ್ಟು ಎಂಜಾಯ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ ಸಲ್ಲು. 
ಸುಲ್ತಾನ್ ಶೂಟಿಂಗ್ ಯಶಸ್ವಿಯಾಗಿ ನಡೆಸಿದ್ದೇವೆ. ಮುಜಾಫರ್ ನಗರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸಿಎಂ ಅಖಿಲೇಶ್ ಯಾದವ್ ಹಾಗೂ ಇಲ್ಲಿನ ಜನರ ಪ್ರೋತ್ಸಾಹವಿಲ್ಲದೇ ಸಾಧ್ಯವಿರಲಿಲ್ಲ. ಇದ್ದರಿಂದ ನಾವೆಲ್ಲ ತುಂಬಾ ಎಂಜಾಯ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ ಸಲ್ಮಾನ್..
 
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಶೂಟಿಂಗ್ ಗಾಗಿ ತೆರಳಿದ್ದ ಸಲ್ಮಾನ್ ಗಾಗಿ ಬಿಗಿ ಭತ್ರತೆ ಒದಗಿಸಲಾಗಿತ್ತು. ಫಾರ್ಮ್‌ಹೌಸ್‌ಗೆ ಬಂದಿದ್ದ ಸಲ್ಲು, ಅಲ್ಲಿ ಪಬ್ಲಿಕ್‌ಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಅಲ್ಲದೇ 20 ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳನ್ನು ನಿಯೋಜಿಸಲಾಗಿತ್ತು.
 
ಸುಲ್ತಾನ್ ಚಿತ್ರವನ್ನು ಅಲಿ ಅಬ್ಬಾಸ್ ಜಫರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕುಸ್ತಿಪಟು ಪಾತ್ರಕ್ಕಾಗಿ ಸಲ್ಮಾನ್ ಸಾಕಷ್ಟು ತರಬೇತಿ ಪಡೆಯುತ್ತಿದ್ದಾರಂತೆ. ಯಶ್‌ರಾಜ್ ಬ್ಯಾನರ್‌ನಲ್ಲಿ ಮೂಡಿ ಬರುತ್ತಿರುವ ಸುಲ್ತಾನ್ ಚಿತ್ರದಲ್ಲಿ ಅನುಶ್ಕಾ ಶರ್ಮಾ ಸೇರಿದಂತೆ ಹಲವರು ಇದ್ದಾರೆ. ಈದ್ ಹಬ್ಬದಂದು ಚಿತ್ರ ರಿಲೀಸ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ವೆಬ್ದುನಿಯಾವನ್ನು ಓದಿ