ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ.
ಬೆಂಗಳೂರು, ಮದ್ದೂರು, ತಿರುಪತಿ, ಹೈದರಾಬಾದ್, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆದಿದ್ದು, ಒಂದು ಹಾಡಿನ ಚಿತ್ರೀಕರಣ ಬಾಕಿಯಿದೆಯಂತೆ.ಶೈಲೇಂದ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶೈಲೇಂದ್ರಬಾಬು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪಿ.ಕುಮಾರ್ ನಿರ್ದೇಶಿಸುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಜಗದೀಶ್ ವಾಲಿ ಛಾಯಾಗ್ರಹಣ ಚಿತ್ರಕ್ಕಿದೆ. ಸುಮಂತ್, ಕೃತಿ ಖರಬಂಧ, ಸಾಧುಕೋಕಿಲ, ಮುಂತಾದವರು ಚಿತ್ರದಲ್ಲಿದ್ದಾರೆ.